‘ಕಾಂಗ್ರೆಸ್ ಗ್ಯಾರಂಟಿ ಕಾರ್ಡ್’ ವಿತರಣೆ, ರೈ ನೇತೃತ್ವದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಪುಂಚಮೆಯಲ್ಲಿ ಚಾಲನೆ

ಜಾಹೀರಾತು

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಸರ್ವಧರ್ಮಗಳ ಪ್ರಾರ್ಥನೆ ಬಳಿಕ ಪುಂಚಮೆ ಯಿಂದ14 ದಿನಗಳ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಚಾಲನೆ ದೊರಕಿತು.

ಜಾಹೀರಾತು

ಬಂಟ್ವಾಳ ವೆಂಕಟರಮಣ ದೇವಸ್ಥಾನ, ಅಗ್ರಹಾರ ಚರ್ಚ್, ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪೊಳಲಿ ಸಮೀಪ ಪುಂಚಮೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಕಾಂಗ್ರೆಸ್ ಗ್ಯಾರಂಟಿ ಕಾರ್ಡ್’ ವಿತರಿಸುವ ಹಾಗೂ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಯಾತ್ರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಮತ್ತೆ ಬರಬೇಕಿದೆ, ಈಗಾಗಲೇ ಜನರಿಗೆ ಗ್ಯಾರಂಟಿ ಕಾರ್ಡ್ ಗಳನ್ನು ನೀಡುತ್ತಿದ್ದೇವೆ. ಸರಕಾರ ಬಂದ ಕೂಡಲೇ ಇವುಗಳನ್ನು ಜಾರಿಗೊಳಿಸಲಾಗುವುದು, ಜೊತೆಗೆ ಬಿಜೆಪಿ ಸರಕಾರ ಈಗ ನಡೆಸುತ್ತಿರುವ ದುರಾಡಳಿತವನ್ನು ಕೊನೆಗೊಳಿಸಬೇಕು, ಇದಕ್ಕಾಗಿ ರಮಾನಾಥ ರೈ ಮತ್ತೆ ಗೆದ್ದು ಮಂತ್ರಿಯಾಗಬೇಕು ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಿಜೆಪಿ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ಕಾಂಗ್ರೆಸ್ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತುಲನೆ ಮಾಡಬೇಕಾಗಿದ್ದು, ಪಶ್ಚಿಮ ವಾಹಿನಿ ಯೋಜನೆಗೆ ಮೂಲ ಕಾರಣ ಕಾಂಗ್ರೆಸ್ ಸರಕಾರವಾಗಿದ್ದು, ಆದರೆ ಈ  ಬಗ್ಗೆ ಬಿಜೆಪಿ ದಾರಿತಪ್ಪಿಸುವ ಹೇಳಿಕೆ ನೀಡುತ್ತಿದೆ ಎಂದರು.

ಜಾಹೀರಾತು

ಯಾತ್ರೆಗೆ ಸಿದ್ಧಪಡಿಸಿದ ವಾಹನದಲ್ಲಿ ಸಂಚಾಲಕ ಪಿಯೂಸ್ ಎಲ್. ರೋಡ್ರಿಗಸ್ ಈ ಸಂದರ್ಭ ಉಪಸ್ಥಿತರಿದ್ದು, ಯಾತ್ರೆ ವಿವರಗಳನ್ನು ತಿಳಿಸಿದರು.

ಬಳಿಕ ಯಾತ್ರೆಯಲ್ಲಿ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವಿವಿಧ ಪ್ರಮುಖರಾದ ಪ್ರಥ್ವೀರಾಜ್, ಕೊಳ್ನಾಡು ಸುಭಾಶ್ಚಂದ್ರ ಶೆಟ್ಟಿ, ಎಡ್ತೂರು ರಾಜೀವ ಶೆಟ್ಟಿ, ಬಿ.ಎಂ. ಅಬ್ಬಾಸ್ ಅಲಿ, ಲವೀನಾ ವಿಲ್ಮಾ ಮೊರಾಸ್, ಮಲ್ಲಿಕಾ ಪಕ್ಕಳ, ಜಯಂತಿ ಪೂಜಾರಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮೋಹನ ಗೌಡ ಕಲ್ಮಂಜ, ಜಗದೀಶ್ ಕೊಯಿಲ, ಮಲ್ಲಿಕಾ ಶೆಟ್ಟಿ, ವೆಂಕಪ್ಪ ಪೂಜಾರಿ, ಪದ್ಮನಾಭ ರೈ, ಪಿ.ಎ. ರಹೀಂ, ಸಂಪತ್ ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ಸುರೇಶ್ ಜೋರಾ, ಇಬ್ರಾಹಿಂ ನವಾಝ್, ಮಧುಸೂದನ್ ಶೆಣೈ, ಮನೋಹರ್ ನೇರಂಬೋಳು, ಲೋಲಾಕ್ಷ ಶೆಟ್ಟಿ, ಚಂದ್ರಹಾಸ ಭಂಡಾರಿ, ಮಹಮ್ಮದ್ ಶರೀಫ್, ಸಿದ್ದಿಕ್ ಗುಡ್ಡೆಯಂಗಡಿ, ಮುಹಮ್ಮದ್ ನಂದರಬೆಟ್ಟು, ಸಿದ್ದೀಕ್ ಸರವು, ಸಿರಾಜ್ ಮದಕ, ಇಬ್ರಾಹಿಂ ಗುಂಡಿ, ಬಿ.ವಾಸು ಪೂಜಾರಿ, ಪ್ಲೋಸಿ ಡಿಸೋಜಾ, ಚಂದ್ರಶೇಖರ ಪೂಜಾರಿ, ಲುಕ್ಮಾನ್ ಬಂಟ್ವಾಳ, ಶಬೀರ್ ಸಿದ್ದಕಟ್ಟೆ, ಡೆಂಜಿಲ್ ನೊರೊನ್ಹಾ, ತಿಲಕ್ ಮಂಚಿ, ಸಂಜಿತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.  ಕರಿಯಂಗಳ ಗ್ರಾ.ಪಂ.ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಸ್ವಾಗತಿಸಿದರು. ಮಾಣಿ ಗ್ರಾಪಂ ಅಧ್ಯಕ್ಷ ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಯಾತ್ರೆ ವಿವರಕ್ಕೆ ಈ ಲಿಂಕ್ ಕ್ಲಿಕ್ ಮಾಡಿರಿ

ಕಾಂಗ್ರೆಸ್ ನ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಾಳೆಯಿಂದ, ವಿವರ ಇಲ್ಲಿದೆ

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "‘ಕಾಂಗ್ರೆಸ್ ಗ್ಯಾರಂಟಿ ಕಾರ್ಡ್’ ವಿತರಣೆ, ರೈ ನೇತೃತ್ವದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಪುಂಚಮೆಯಲ್ಲಿ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*