ಬಂಟ್ವಾಳ

ಬಂಟ್ವಾಳ ತಾಲೂಕು ಎರಡನೇ ಗಮಕ ಸಮ್ಮೇಳನ ಉದ್ಘಾಟನೆ – ಗಮಕ ಕಲೆಗೆ ಸರಕಾರದ ಪ್ರೋತ್ಸಾಹ ಅಗತ್ಯ: ಹರಿಕೃಷ್ಣ ಪುನರೂರು

ಇಂದು ಗಮಕ ವಾಚನಕ್ಕೆ ಸಂಬಂಧಿಸಿದ ಕಲಾಪೋಷಣೆಗೆ ಜನರ ಪ್ರೋತ್ಸಾಹವಷ್ಟೇ ಅಲ್ಲ, ಸರಕಾರದ ನೆರವೂ ಬೇಕಾಗುತ್ತದೆ. ಕೇವಲ ಬಾಯ್ಮಾತಿನ ಹೇಳಿಕೆಯಷ್ಟೇ ಅಲ್ಲ, ಆರ್ಥಿಕ ಬೆಂಬಲ ದೊರಕಿದರೆ, ಗಮಕ ಕಲೆ ಸದೃಢವಾಗಿ ಬೆಳೆಯಬಲ್ಲದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

ಜಾಹೀರಾತು

ಡಾ. ವಾರಿಜಾ ನಿರ್ಬೈಲ್ ಸರ್ವಾಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸಭಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ಮಟ್ಟದ ಎರಡನೇ ಗಮಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಗಮಕ ಕಲಾ ಪರಿಷತ್ ವತಿಯಿಂದ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯುತ್ತಿದ್ದು, ಇದು ಕನ್ನಡ ಸಾಹಿತ್ಯ ಪರಿಷತ್ತಿನಂತೆಯೇ ಗಟ್ಟಿಯಾಗಿ ಬೆಳೆಯಬೇಕು. ಗಮಕ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಲ್ಲಿ ಪೋಷಕರು ಮಕ್ಕಳನ್ನು ತೊಡಗಿಸಿಕೊಳ್ಳಬೇಕು. ಮಕ್ಕಳಿಗೆ ಗಮಕದ ಪರಿಚಯ ಆಗಬೇಕು. ಹಾಗೆಯೇ ಪರಿಷತ್ತಿನ ಅಭಿವೃದ್ಧಿಗೆ ಸಲಹೆ ಜೊತೆ ಸಹಕಾರವೂ ಬೇಕು. ಕಲೆ ಬೆಳೆಸುವ ಕೆಲಸ ಮಾಡಬೇಕು ಎಂದು ಪುನರೂರು ಹೇಳಿದರು.

ಅಧ್ಯಕ್ಷತೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ವಹಿಸಿದ್ದರು. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಡಾ.ವಾರಿಜಾ ನಿರ್ಬೈಲ್ ಮಾತನಾಡಿ, ಕವಿಯು ಶ್ರಮ ಪಟ್ಟು ರಚಿಸಿದ ಕಾವ್ಯಾನುಭವವನ್ನು ಶ್ರೋತೃಗಳಿಗೆ ತಲುಪಿಸಲು ಗಮಕಿಗಳ ಪಾತ್ರ ದೊಡ್ಡದು ಎಂದರು.

ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ ಪಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಪ್ರಧಾನ ಸಂಚಾಲಕ ಕೃಷ್ಣ ಶರ್ಮ ಅನಾರು, ಸಂಚಾಲಕ ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು. ತಾಲೂಕು ಅಧ್ಯಕ್ಷ ಕೈಯೂರು ನಾರಾಯಣ ಭಟ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು. ನಿವೃತ್ತ ಪ್ರಿನ್ಸಿಪಾಲ್ ಡಾ.ಮಹಾಲಿಂಗ ಭಟ್ ವಂದಿಸಿದರು. ಬಳಿಕ ಹಿರಿ, ಕಿರಿಯರಿಂದ ಗಮಕ ವಾಚನ, ವಿಚಾರಗೋಷ್ಠಿ, ತಾಳಮದ್ದಳೆ ಸಂವಾದಗಳು ನಡೆದವು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago