ಬಂಟ್ವಾಳ

ಬಂಟ್ವಾಳ ತಾಲೂಕು ಎರಡನೇ ಗಮಕ ಸಮ್ಮೇಳನ ಉದ್ಘಾಟನೆ – ಗಮಕ ಕಲೆಗೆ ಸರಕಾರದ ಪ್ರೋತ್ಸಾಹ ಅಗತ್ಯ: ಹರಿಕೃಷ್ಣ ಪುನರೂರು

ಇಂದು ಗಮಕ ವಾಚನಕ್ಕೆ ಸಂಬಂಧಿಸಿದ ಕಲಾಪೋಷಣೆಗೆ ಜನರ ಪ್ರೋತ್ಸಾಹವಷ್ಟೇ ಅಲ್ಲ, ಸರಕಾರದ ನೆರವೂ ಬೇಕಾಗುತ್ತದೆ. ಕೇವಲ ಬಾಯ್ಮಾತಿನ ಹೇಳಿಕೆಯಷ್ಟೇ ಅಲ್ಲ, ಆರ್ಥಿಕ ಬೆಂಬಲ ದೊರಕಿದರೆ, ಗಮಕ ಕಲೆ ಸದೃಢವಾಗಿ ಬೆಳೆಯಬಲ್ಲದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

ಜಾಹೀರಾತು

ಡಾ. ವಾರಿಜಾ ನಿರ್ಬೈಲ್ ಸರ್ವಾಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸಭಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ಮಟ್ಟದ ಎರಡನೇ ಗಮಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಗಮಕ ಕಲಾ ಪರಿಷತ್ ವತಿಯಿಂದ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯುತ್ತಿದ್ದು, ಇದು ಕನ್ನಡ ಸಾಹಿತ್ಯ ಪರಿಷತ್ತಿನಂತೆಯೇ ಗಟ್ಟಿಯಾಗಿ ಬೆಳೆಯಬೇಕು. ಗಮಕ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಲ್ಲಿ ಪೋಷಕರು ಮಕ್ಕಳನ್ನು ತೊಡಗಿಸಿಕೊಳ್ಳಬೇಕು. ಮಕ್ಕಳಿಗೆ ಗಮಕದ ಪರಿಚಯ ಆಗಬೇಕು. ಹಾಗೆಯೇ ಪರಿಷತ್ತಿನ ಅಭಿವೃದ್ಧಿಗೆ ಸಲಹೆ ಜೊತೆ ಸಹಕಾರವೂ ಬೇಕು. ಕಲೆ ಬೆಳೆಸುವ ಕೆಲಸ ಮಾಡಬೇಕು ಎಂದು ಪುನರೂರು ಹೇಳಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ವಹಿಸಿದ್ದರು. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಡಾ.ವಾರಿಜಾ ನಿರ್ಬೈಲ್ ಮಾತನಾಡಿ, ಕವಿಯು ಶ್ರಮ ಪಟ್ಟು ರಚಿಸಿದ ಕಾವ್ಯಾನುಭವವನ್ನು ಶ್ರೋತೃಗಳಿಗೆ ತಲುಪಿಸಲು ಗಮಕಿಗಳ ಪಾತ್ರ ದೊಡ್ಡದು ಎಂದರು.

ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ ಪಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಪ್ರಧಾನ ಸಂಚಾಲಕ ಕೃಷ್ಣ ಶರ್ಮ ಅನಾರು, ಸಂಚಾಲಕ ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು. ತಾಲೂಕು ಅಧ್ಯಕ್ಷ ಕೈಯೂರು ನಾರಾಯಣ ಭಟ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು. ನಿವೃತ್ತ ಪ್ರಿನ್ಸಿಪಾಲ್ ಡಾ.ಮಹಾಲಿಂಗ ಭಟ್ ವಂದಿಸಿದರು. ಬಳಿಕ ಹಿರಿ, ಕಿರಿಯರಿಂದ ಗಮಕ ವಾಚನ, ವಿಚಾರಗೋಷ್ಠಿ, ತಾಳಮದ್ದಳೆ ಸಂವಾದಗಳು ನಡೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ