ಬಂಟ್ವಾಳದಲ್ಲಿ ಅದ್ದೂರಿಯ ವಿಜಯ ಸಂಕಲ್ಪ ಯಾತ್ರೆ: ಬಿಜೆಪಿಗೆ ಪೂರ್ಣ ಬಹುಮತ – ಕೆ.ಎಸ್.ಈಶ್ವರಪ್ಪ

ಬಂಟ್ವಾಳ ಕ್ಷೇತ್ರಕ್ಕೆ ವಿಜಯ ಸಂಕಲ್ಪ ಹೆಸರಿನಲ್ಲಿ ಬಿಜೆಪಿಯ ಯಾತ್ರೆ ಭಾನುವಾರ ಪುಂಜಾಲಕಟ್ಟೆ ಮೂಲಕ ಪ್ರವೇಶಿಸಿ ಹೆದ್ದಾರಿಯಲ್ಲಿ ರೋಡ್ ಶೋ, ಬೈಕ್ ಜಾಥಾ ಬಳಿಕ ಬಂಟ್ವಾಳದಲ್ಲಿ ಸಮಾಪನಗೊಂಡಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ,ಇಡೀ ಕರ್ನಾಟಕಕ್ಕೆ ರಾಷ್ಟ್ರೀಯತೆ ಜಾಗೃತಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಪೂರ್ಣ ಬಹುಮತದೊಂದಿಗೆ ಬರಲು ನೆರವಾಗಬೇಕು ಎಂದರು. ಕರ್ನಾಟಕದ ಎಲ್ಲ ಇಲಾಖೆಗಳ ಹಣವನ್ನು ನೇರವಾಗಿ ಬಂಟ್ವಾಳಕ್ಕೇ ತಂದವರು ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಎಂದು ಶಾಸಕರನ್ನು ಶ್ಲಾಘಿಸಿದರು. (ವಿಜಯ ಸಂಕಲ್ಪ ಯಾತ್ರೆ ವಿಡಿಯೋಗೆ ಕ್ಲಿಕ್ ಮಾಡಿರಿ) VIDEO

ಜಾಹೀರಾತು

ಬೆಳ್ತಂಗಡಿಯಿಂದ ಬಂದ ರಥವನ್ನು ಶಾಸಕ ರಾಜೇಶ್ ನಾಯ್ಕ್ ಮತ್ತು ಜಿಪಂ ಮಾಜಿ ಸದಸ್ಯ ತುಂಗಪ್ಪ ಬಂಗೇರ ಪುಂಜಾಲಕಟ್ಟೆಯಲ್ಲಿ ಭಾನುವಾರ ಮಧ್ಯಾಹ್ನ ಸ್ವಾಗತಿಸಿದರು. ಬಳಿಕ ಬಂಟ್ವಾಳದ ಬಡ್ಡಕಟ್ಟೆವರೆಗೆ ಬೈಕ್ ಜಾಥಾ ನಡೆಯಿತು. ಈ ಸಂದರ್ಭ ಅಪಾರ ಸಂಖ್ಯೆಯಲ್ಲಿ ಬೈಕ್, ಆಟೊ, ಕಾರು ಮೊದಲಾದ ವಾಹನಗಳು ಸಾಗಿಬಂದವು. ಬಂಟ್ವಾಳ ಬಡ್ಡಕಟ್ಟೆ ಶ್ರೀ ಹನುಮಾನ್ ದೇವಸ್ಥಾನ ಮುಂಭಾಗದಿಂದ ರೋಡ್ ಶೋ ನಗರ ಮಾರ್ಕೆಟ್ ರಸ್ತೆಯಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ರಥಬೀದಿಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಸಮಾಪನಗೊಂಡಿತು

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ,ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ದತ್ತಾತ್ರೇಯ, ಸುಲೋಚನಾ ಜಿ.ಕೆ. ಭಟ್, ಕೊರಗಪ್ಪ ನಾಯ್ಕ್, ಹರಿಕೃಷ್ಣ ಬಂಟ್ವಾಳ್, ರಾಮದಾಸ ಬಂಟ್ವಾಳ, ಸುಧೀರ್ ಶೆಟ್ಟಿ ಕಣ್ಣೂರು, ಮಾಧವ ಮಾವೆ, ದೇವದಾಸ ಶೆಟ್ಟಿ,ದೇವಪ್ಪ ಪೂಜಾರಿ, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುದರ್ಶನ ಬಜ, ಪ್ರಸಾದ್ ಕುಮಾರ್, ರೋನಾಲ್ಡ್ ಡಿಸೋಜ, ಗಣೇಶ್ ರೈ ಮಾಣಿ, ರಮಾನಾಥ ರಾಯಿ, ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಪದವು, ಗೋವಿಂದ ಪ್ರಭು, ಪುಪ್ಪರಾಜ ಶೆಟ್ಟಿ, ಅರುಣ್ ರೋಶನ್ ಡಿಸೋಜ, ಯಶೋಧರ ಕರ್ಬೆಟ್ಟು, ಮೋನಪ್ಪ ದೇವಸ್ಯ, ಪುರುಷೋತ್ತಮ ಸಾಲಿಯಾನ್ ಶಂಭೂರು, ಧನಂಜಯ ಶೆಟ್ಟಿ ಸರಪಾಡಿ, ವಜ್ರನಾಥ ಕಲ್ಲಡ್ಕ, ಮೋನಪ್ಪ ದೇವಸ್ಯ, ಕೃಷ್ಣಪ್ಪ ಪೂಜಾರಿ, ಸುರೇಶ್ ಕೋಟ್ಯಾನ್, ರಶ್ಮಿತ್ ಶೆಟ್ಟಿ ಕೈತ್ರೋಡಿ, ಹರ್ಷಿಣಿ ಪುಷ್ಪಾನಂದ ಪಕ್ಷದ ವಿವಿಧ ಮುಖಂಡರು, ಪದಾಧಿಕಾರಿಗಳು, ಮಹಿಳಾ, ಯುವ ಮೋರ್ಚಾಗಳ ಮುಖಂಡರು, ಕಾರ್ಯಕರ್ತರು, ವಿವಿಧ ಗ್ರಾಪಂ, ಪುರಸಭೆ ಸದಸ್ಯರು ಮೊದಲಾದವರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಅದ್ದೂರಿಯ ವಿಜಯ ಸಂಕಲ್ಪ ಯಾತ್ರೆ: ಬಿಜೆಪಿಗೆ ಪೂರ್ಣ ಬಹುಮತ – ಕೆ.ಎಸ್.ಈಶ್ವರಪ್ಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*