ವಿಟ್ಲ

ಪೂರ್ಲಪ್ಪಾಡಿ ಪೈಸಾರಿಯಲ್ಲಿ ಶ್ರೀ ನಾಗದೇವರಿಗೆ ಬ್ರಹ್ಮಕಲಶ ಮತ್ತು ಶ್ರೀ ರಕ್ತೇಶ್ವರಿ, ಗುಳಿಗ ದೈವದ ಮತ್ತು ರಕ್ಷಬ್ರಹ್ಮ ಸಾನಿಧ್ಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ

ಜಾಹೀರಾತು

ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಪೈಸಾರಿ ಎಂಬಲ್ಲಿ ಶ್ರೀ ನಾಗದೇವರಿಗೆ ಬ್ರಹ್ಮಕಲಶ ಮತ್ತು ಶ್ರೀ ರಕ್ತೇಶ್ವರಿ, ಗುಳಿಗ ದೈವದ ಮತ್ತು ರಕ್ಷಬ್ರಹ್ಮ ಸಾನಿಧ್ಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ವೇದಮೂರ್ತಿ ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿ ನೇತೃತ್ವದಲ್ಲಿ ನಡೆಯಿತು.

ರಾತ್ರಿ ಜರುಗಿದ ವಾಸ್ತು ಹೋಮ, ವಾಸ್ತು ಬಲಿ ಪೂಜಾ ಸಮಯ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಭಜನಾ ಸೇವೆ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೆ ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರ, ಕಣಿಯೂರು – ಕನ್ಯಾನ ಇಲ್ಲಿಯ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಭೇಟಿ ಇತ್ತು ಆಶೀರ್ವದಿಸಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ.,  ಕೃಷ್ಣ ವರ್ಮ ಮತ್ತಿತರರು ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭ ಸ್ಥಳ ಸಾನಿಧ್ಯದ ಯಮುನಾ, ಮೋನಪ್ಪ ನಾಯ್ಕ ಪೂರ್ಲಪ್ಪಾಡಿ ಮತ್ತು ಶ್ರೀ ಮಲರಾಯಿ ದೇವಸ್ಥಾನ ಆಡಳಿತ ಟ್ರಸ್ಟ್ (ರಿ.) ಪೂರ್ಲಪ್ಪಾಡಿ ಸದಸ್ಯರು ಸಹಕರಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.