ಬಂಟ್ವಾಳ

ಪ.ಜಾತಿ, ಪಂಗಡ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಸೌಲಭ್ಯ ವಿತರಣೆ

ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಭವ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆನೀಡುವ ದ್ವಿಚಕ್ರ ವಾಹನ ಸೌಲಭ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.

ಜಾಹೀರಾತು

ಒಟ್ಟು 23 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ, ಉಳಿದ ಫಲಾನುಭವಿಗಳಿಗೆ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಬಂಟ್ವಾಳ ದಲ್ಲಿ ಅತೀ ಹೆಚ್ಚು 70  ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದ್ದು ಈಗಾಗಲೇ 29  ಮಂದಿಗೆ ವಿತರಿಸಲಾಗಿದೆ. ಉಳಿದಿರುವ ಸೌಲಭ್ಯಗಳನ್ನು ಕ್ರಮಬದ್ದವಾಗಿ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ್ ತಿಳಿಸಿದರು.

ಜಾಹೀರಾತು

ಈ ಸಂದರ್ಭ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಿಯಿ, ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವನಿತಾ ಪುರುಷೋತ್ತಮ,  ಎಸ್.ಟಿ.ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ್, ಪ್ರಧಾನ ಕಾರ್ಯದರ್ಶಿ ಯಶವಂತ ನಗ್ರಿ, ಎಸ್.ಸಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಚೆಂಡ್ತಿಮಾರ್, ಗ್ರಾ.ಪಂ.ಸದಸ್ಯರಾದ ಪ್ರಶಾಂತ್ ಪೂಜಾರಿ ವಿಟ್ಲುಕೋಡಿ, ಪ್ರಮುಖರಾದ ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಚರಣ್ ಜುಮಾದಿಗುಡ್ಡೆ, ಶಶಿರಾಜ್ ಶೆಟ್ಟಿ ಸರಪಾಡಿ,ರಮೇಶ್ ರಾವ್ ಮಂಚಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ