ಕುಡಿಯುವ ನೀರಿನ ಸಮಸ್ಯೆ: ತುರ್ತು ಪರಿಹಾರಕ್ಕೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತುರ್ತು ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳು, ಪಿಡಿಒಗಳು ಮತ್ತು ಗ್ರಾಪಂ ಅಧ್ಯಕ್ಷರ ತುರ್ತು ಸಭೆಯಲ್ಲಿ ಅವರು ಮಾತನಾಡಿ, ಕುಡಿಯುವ ನೀರಿಗೆ ಎಲ್ಲಿ ಸಂಪನ್ಮೂಲಗಳಿವೆಯೋ ಅವುಗಳನ್ನು ಬಳಸಿಕೊಂಡು ಜನರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಜಿಪಂ ಸಿಇಒ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಐದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಚಾಲ್ತಿಯಲ್ಲಿದೆ. ಆದರೆ ಸಂಗಬೆಟ್ಟು ಬಹುಗ್ರಾಮ ಯೋಜನೆಯ ಮಡಿಲಲ್ಲೇ ನೀರಿನ ಸಮಸ್ಯೆ ತಲೆದೋರಿರುವುದು ಯೋಜನೆಯ ವೈಫಲ್ಯವನ್ನು ಸೂಚಿಸುತ್ತದೆ. ಅಂತರ್ಜಲ ಬತ್ತಿಹೋದ ಸಂದರ್ಭ ಪರ್ಯಾಯ ವ್ಯವಸ್ಥೆ ಹುಡುಕಿಕೊಳ್ಳಬೇಕು ಎಂದರು.

ಜಾಹೀರಾತು

ತಾಲೂಕಿನ ಹಲವು ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಈ ಸಂದರ್ಭ ನೀರಿನ ಸಮಸ್ಯೆಗಳ ಕುರಿತು ವಿವರ ನೀಡಿದರು. ಅರಳ ಗ್ರಾಪಂ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ ಮಾತನಾಡಿ, ಸಂಗಬೆಟ್ಟು ಬಹುಗ್ರಾಮ ಯೋಜನೆಗೆ ಒಳಪಡುವ ಗ್ರಾಮಗಳಿಗೆ ನೀರಿಲ್ಲ ಎಂದರೆ, ಮಾಣಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ, ಬಹುಗ್ರಾಮ ಯೋಜನೆಯ ಪೈಪುಗಳನ್ನು ಹೆದ್ದಾರಿ ಕಾಮಗಾರಿ ನಡೆಸುವವರು ಒಡೆದು ಹಾಕುವ ಸಂದರ್ಭ ಸಮಸ್ಯೆ ಉಂಟಾಗಿದೆ ಎಂದರು. ಗೋಳ್ತಮಜಲು ಪಿಡಿಒ ವಿಜಯಶಂಕರ ಆಳ್ವ ಅವರೂ ಈ ಕುರಿತು ಮಾತನಾಡಿ, ಹೈವೇ ಕಾಮಗಾರಿ ನಡೆಯುವ ಪ್ರದೇಶವಾದ ಗೋಳ್ತಮಜಲಲ್ಲಿ ನೀರಿನ ಪೈಪುಗಳು ಹೆದ್ದಾರಿ ಕಾಮಗಾರಿ ಸಂದರ್ಭ ಹಾನಿಗೀಡಾಗುತ್ತಿವೆ ಎಂದರು. ಇದೇ ಸಮಸ್ಯೆಯನ್ನು ನರಿಕೊಂಬು ಗ್ರಾಪಂ ಅಧ್ಯಕ್ಷೆ ವಿನಿತಾ ಪುರುಷೋತ್ತಮ ಹೇಳಿದರು. ಚೆನ್ನೈತೋಡಿಯ ಸಮಸ್ಯೆಗಳ ಕುರಿತು ಭಾರತಿ ರಾಜೇಂದ್ರ ಪೂಜಾರಿ ಪ್ರಸ್ತಾಪಿಸಿದರು.

ಈ ಸಂದರ್ಭ ಮಾತನಾಡಿದ ಜಿಪಂ ಸಿಇಒ ಕುಮಾರ್, ಕಾಮಗಾರಿ ಸಂದರ್ಭ ಪೈಪ್ ಹಾಳಾದರೆ ಅದು ಒಂದರಿಂದ ಎರಡು ದಿನದೊಳಗೆ ರಿಪೇರಿ ಆಗದಿದ್ದರೆ ಪಿಡಿಒ ಸಂಬಂಧಪಟ್ಟವರ ಗಮನಕ್ಕೆ ತರಬೇಕು ಎಂದರು. ಬೋರ್ವೆಲ್ ಬತ್ತಿ ಹೋಗಿರುವ ಒಂದು ಕಿ.ಮೀ. ವ್ಯಾಪ್ತಿಯ ಖಾಸಗಿ ಬಾವಿ, ಬೋರ್ವೆಲ್ ಗಳ ಪಟ್ಟಿ ಮಾಡಿಕೊಳ್ಳಬೇಕು ಎಂದು ಈ ಸಂದರ್ಭ ಕುಮಾರ್ ಸೂಚನೆ ನೀಡಿದರು. ಅನುಮತಿ ಪಡೆಯದೆ ಸಭೆಗೆ ಬಾರದ ಪಿಡಿಒಗಳು ನನ್ನ ಕಚೇರಿಗೆ ಬಂದು ಭೇಟಿಯಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಕುಮಾರ್ ಹೇಳಿದರು.

ಈ ಸಂದರ್ಭ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ನರೇಂದ್ರಬಾಬು, ತಾಲೂಕು ಪಂಚಾಯಿತಿ ಇಒ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುಡಿಯುವ ನೀರಿನ ಸಮಸ್ಯೆ: ತುರ್ತು ಪರಿಹಾರಕ್ಕೆ ಶಾಸಕ ರಾಜೇಶ್ ನಾಯ್ಕ್ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*