ಸಿಟಿಜನ್ಸ್ ಫೋರಂ ಆಶ್ರಯದಲ್ಲಿ ಜನಸಂವಾದ: ಸರಕಾರವನ್ನು ಖಾಸಗಿ ವ್ಯಕ್ತಿಗಳು ನಿಯಂತ್ರಿಸಿದರೆ ಅಪಾಯ – ಚೊಕ್ಕಾಡಿ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸಿಟಿಜನ್ಸ್ ಫೋರಂ ಆಶ್ರಯದಲ್ಲಿ ರಾಜಕೀಯರಹಿತ ಜನಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಚಿಂತಕ, ಲೇಖಕ ಅರವಿಂದ ಚೊಕ್ಕಾಡಿ, ನಮ್ಮ ಅಭಿವೃದ್ಧಿಯ ಪರಿಕಲ್ಪನೆಯಲ್ಲಿ ಸಮಸ್ಯೆ ಇದೆ. ಅಭಿವೃದ್ದಿಯ ಬಗ್ಗೆ ನಮ್ಮ ಗ್ರಹಿಕೆಯಲ್ಲಿ ಸಮಸ್ಯೆ ಇದೆ, ಆರೋಗ್ಯ, ಶಿಕ್ಷಣ, ಆಹಾರ ವ್ಯವಸ್ಥೆ ಆಗದೆ ಬೇರೆ ಅಭಿವೃದ್ಧಿಗೆ ಅರ್ಥವಿಲ್ಲ ಎಂದರು.

ಜಾಹೀರಾತು

ಪ್ರಜಾಪ್ರಭುತ್ವದಲ್ಲಿ ಜನರ ಮತ್ತು ಜನಪ್ರತಿನಿಧಿಗಳ ಕರ್ತವ್ಯ  ವಿಚಾರದ ಮಂಡಿಸಿ ಮಾತನಾಡಿದ ಅವರು, ಜನರ ಒಂದು ಭಾಗವೇ ಜನಪ್ರತಿನಿಧಿಗಳು.‌ ಸರಕಾರವನ್ನು ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳು ನಿಯಂತ್ರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯ ಚಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಜನಪರವಾಗಿ ಧ್ವನಿ ಎತ್ತಬಲ್ಲವರನ್ನು ಶಾಸಕರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿ ಜನರಿಗಿದೆ. ಸಮಾಜದ ಅಭಿವೃದಿಗೆ ಮಾಜಿ ಶಾಸಕರು ತಮ್ಮ‌ಅನುಭವವನ್ನು ಧಾರೆ ಎರೆಯಬೇಕು ಎಂದು ತಿಳಿಸಿದರು.

 ಸಿಟಿಜನ್ಸ್  ಫಾರಮ್ ಅಧ್ಯಕ್ಷ  ಸದಾಶಿವ ರೈ ಚೆಲ್ಲಡ್ಕ ಉಪಸ್ಥಿತರಿದ್ದರು. ಬಳಿಕ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಸಾಧನೆಯ ಬೆಳ್ಳಿಪಥ ಸಾಕ್ಷ ಚಿತ್ರವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಉದ್ಘಾಟಿಸಿದರು.  ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದರ್ಶನ ‌ಜೈನ್, ಪದ್ಮಶೇಖರ ಜೈನ್, ಎಂ. ಎಸ್. ಮಹಮ್ನದ್, ಮಾಯಿಲಪ್ಪ ಸಾಲ್ಯಾನ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಜಯಂತಿ ವಿ. ಪೂಜಾರಿ, ಸದಾಶಿವ ಬಂಗೇರ,  ವಾಸು ಪೂಜಾರಿ, ಚಂದ್ರಶೇಖರ ಪೂಜಾರಿ, ಕೃಷ್ಣಪ್ಪ ಪೂಜಾರಿ ನಾಟಿ, ಪ್ರಸಾದ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿಟಿಜನ್ಸ್ ಫೋರಂ ಆಶ್ರಯದಲ್ಲಿ ಜನಸಂವಾದ: ಸರಕಾರವನ್ನು ಖಾಸಗಿ ವ್ಯಕ್ತಿಗಳು ನಿಯಂತ್ರಿಸಿದರೆ ಅಪಾಯ – ಚೊಕ್ಕಾಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*