ಬಂಟ್ವಾಳ

ಮೀಸಲಾತಿ ರದ್ಧತಿ ವಿರುದ್ಧ ಎಸ್.ಡಿ.ಪಿ.ಐ. ಕಾನೂನಾತ್ಮಕ ಹೋರಾಟ: ಇಲ್ಯಾಸ್ ತುಂಬೆ

ಬಂಟ್ವಾಳ: ಕರ್ನಾಟಕ ಬಿಜೆಪಿ ಸರಕಾರ ಇತ್ತೀಚೆಗೆ 2ಬಿ ಮೀಸಲಾತಿ ರದ್ದು ಮಾಡಿದ್ದನ್ನು ವಿರೋಧಿಸಿ ಹಾಗೂ 2ಬಿ ಮೀಸಲಾತಿಯನ್ನು ಪುನಃ ಸ್ಥಾಪಿಸಲು ಬಯಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಬಿ.ಸಿ ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಪ್ರತಿಭಟನೆ ಜರುಗಿತು.

ಜಾಹೀರಾತು

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಷ್ ಆಲಿ ಬಂಟ್ವಾಳ ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಹಾಗೂ ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿಮೀಸಲಾತಿಯ ರದ್ದತಿಯು ಬಿಜೆಪಿ ಉದ್ದೇಶಿಸಿಕೊಂಡಿರುವ ಹಿಂದೂ ರಾಷ್ಟ್ರದ ಸಂಕಲ್ಪದ ಮುಂದುವರಿದ ಭಾಗವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ಸಿನ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮೀಸಲಾತಿಯು ಮುಸಲ್ಮಾನರಿಗೆ ಸರಕಾರಗಳು ನೀಡುವ ಭಿಕ್ಷೆ ಅಥವಾ ಔದಾರ್ಯವಲ್ಲ. ಅದು ಮುಸಲ್ಮಾನರ ಹಕ್ಕಿನ ಭಾಗ. ಇದರ ವಿರುದ್ಧ ಎಸ್ ಡಿ ಪಿ ಐ ಇನ್ನಿತರ ಪ್ರಗತಿಪರ ಹಾಗೂ ಮುಸ್ಲಿಂ ಸಂಘಟನೆಗಳನ್ನು ಜೊತೆಗೂಡಿಸಿಕೊಂಡು  ಕಾನೂನಾತ್ಮಕವಾಗಿ ಹೋರಾಟ ಮಾಡಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.

ಈ ಸಂದರ್ಭ ಎಸ್ ಡಿ ಪಿ ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಕ್ಷೇತ್ರ ಸಮಿತಿ ಸದಸ್ಯ ಶಾಹುಲ್ ಎಸ್ ಎಚ್, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಮತ್ತು ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಮುಬಾರಕ್ ಗೂಡಿನಬಳಿ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.