ಬಂಟ್ವಾಳ

ಏ.2ರಂದು ವಿಶ್ವ ಹಿಂದು ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡದಿಂದ ನಮ್ಮ ನಡೆ, ಪೊಳಲಿ ದೇವಸ್ಥಾನದ ಕಡೆ

ಜಾಹೀರಾತು

ಸಾಂದರ್ಭಿಕ ಚಿತ್ರ

ಬಂಟ್ವಾಳ: ವಿಶ್ವ ಹಿಂದು ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ನಡೆ ಪೊಳಲಿ ದೇವಸ್ಥಾನ ಕಡೆ ಕಾರ್ಯಕ್ರಮ ಭಾನುವಾರ ಏಪ್ರಿಲ್ 2ರಂದು ನಡೆಯಲಿದೆ ಎಂದು ಅಧ್ಯಕ್ಷ ಪ್ರಸಾದ್ ಕುಮಾರ್ ಮತ್ತು ಕಾರ್ಯದರ್ಶಿ ದೀಪಕ್ ಅಜೆಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 5.30ಕ್ಕೆ ಪಾದಯಾತ್ರೆ ಮೂರು ಕಡೆಗಳಿಂದ ಹೊರಡಲಿದೆ. ಪೊಳಲಿ ದ್ವಾರಗಳಾದ ಕಡೆಗೋಳಿ, ಬಿ.ಸಿ.ರೋಡಿನ ಕೈಕಂಬ, ಗುರುಪುರ ಕೈಕಂಬಗಳಿಂದ ಯಾತ್ರೆ ಹೊರಡಲಿದ್ದು, ಲೋಕಕಲ್ಯಾಣ, ಹಿಂದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆ ರಕ್ಷಣೆ ಯಾತ್ರೆ ಉದ್ದೇಶ ಎಂದವರು ತಿಳಿಸಿದ್ದಾರೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರಸಂಹಿತೆ ಪಾಲನೆ, ಗೋಸಂರಕ್ಷಣೆಗೆ ಸುಸಜ್ಜಿತ ಗೋಶಾಲೆ ನಿರ್ಮಾಣ, ಹಿಂದು ಬಾಲ ಸಂಸ್ಕಾರ ಕೇಂದ್ರ ಸ್ಥಾಪನೆ, ಉಚಿತ ಸಾಮೂಹಿಕ ವಿವಾಹ, ಜಾತ್ರೆ ಸಂದರ್ಭ ಹಿಂದುಗಳಿಗೆ ಮಾತ್ರ ವ್ಯಾಪಾರ, ದೇವಳದ ವತಿಯಿಂದ ಉತ್ಸವಾದಿ ಸಂದರ್ಭ ರಾತ್ರಿ ಭೋಜನ ವ್ಯವಸ್ಥೆ ಏರ್ಪಡಿಸುವುದೇ ಮೊದಲಾದ ಬೇಡಿಕೆಗಳನ್ನು ಮಂಡಿಸಲಾಗಿದೆ. ಬೆಳಗ್ಗೆ 9ಕ್ಕೆ ಯಾತ್ರೆ ಪೊಳಲಿ ದೇವಸ್ಥಾನ ತಲುಪಿ ಸಮಾಪನಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ