ಬಂಟ್ವಾಳ

ವಿಹಿಂಪ, ಬಜರಂಗದಳದಿಂದ ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ

ನಮ್ಮ ನಡೆ, ಪೊಳಲಿ ದೇವಸ್ಥಾನದ ಕಡೆ ಎಂಬ ಧ್ಯೇಯವಾಕ್ಯದೊಂದಿಗೆ ವಿಶ್ವ ಹಿಂದು ಪರಿಷತ್, ಬಜರಂಗದಳ, ಮಾತೃಮಂಡಳಿ, ದುರ್ಗಾವಾಹಿನಿ ಬಂಟ್ವಾಳ ಪ್ರಖಂಡ ವತಿಯಿಂದ ಬಿ.ಸಿ.ರೋಡ್, ತುಂಬೆ ಹಾಗೂ ಗುರುಪುರ ಕೈಕಂಬದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದವರೆಗೆ ಭಾನುವಾರ ಬೆಳಗ್ಗೆ ಪಾದಯಾತ್ರೆ ನಡೆಯಿತು. ಪೊಳಲಿ ಕ್ಷೇತ್ರದಲ್ಲಿ ಯಾತ್ರೆ ಸಂಪನ್ನಗೊಂಡಿತು.

ಜಾಹೀರಾತು

ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿ, ಗೋ ಶಾಲೆ ನಿರ್ಮಾಣ ಹಾಗೂ ಬಡ ಹಿಂದೂ ಹೆಣ್ಣುಮಕ್ಕಳ ಮದುವೆಗೆ ಕ್ಷೇತ್ರದಿಂದ  ಉಚಿತ ಸಾಮೂಹಿಕ ಮದುವೆ ಸಹಿತ ಭಕ್ತರ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ನೀಡಲಾಯಿತು.

ಬಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ಆರೆಸ್ಸೆಸ್ ಪ್ರಮುಖ ಕೊಡ್ಮಣ್ ಕಾಂತಪ್ಪ ಶೆಟ್ಟಿ, ವಿಹಿಂಪ ಬಂಟ್ವಾಳ ಪ್ರಮುಖ್ ಪ್ರಸಾದ್ ಕುಮಾರ್ ರೈ, ಪ್ರಮುಖರಾದ ಗುರುರಾಜ್ ಬಂಟ್ವಾಳ, ದೀಪಕ್ ಆಜೆಕಲ, ಶಿವಪ್ರಸಾದ್ ತುಂಬೆ, ಸುರೇಶ್ ಬೆಂಜನಪದವು, ಸಂತೋಷ್ ಸರಪಾಡಿ, ಕಿರಣ್ ಕುಮ್ದೇಲ್, ಪ್ರಸಾದ್ ಶಿವಾಜಿನಗರ ಬೆಂಜನಪದವು, ಅಭಿನ್ ರೈ, ಪ್ರವೀಣ್ ಕುಂಟಾಲಫಲ್ಕೆ, ಸಂದೇಶ್ ಕಾಡಬೆಟ್ಟು, ಲೋಕೇಶ್ ಲಚ್ಚಿಲ್, ರೋಹಿತ್ ಪೋಡಿಕಲ, ಘಟಕಗಳ ಸದಸ್ಯರು ಕಾರ್ಯಕರ್ತರು ಗುರುಪುರ ಪ್ರಖಂಡದ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ