ಬಂಟ್ವಾಳ

ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಶುರು

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಮಕ್ಕಳ ಬೇಸಗೆ ಶಿಬಿರ ಆರಂಭಗೊಂಡಿತು.

ಜಾಹೀರಾತು

ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೇಸಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ಗೌರವ ಪ್ರಧಾನ ಕಾರ್ಯದರ್ಶಿ ವಿ.ಸು.ಭಟ್ ಶುಭ ಹಾರೈಸಿದರು.ಅಧ್ಯಕ್ಷತೆ  ವಹಿಸಿದ್ದ ಜೇಸಿ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಕಾರ್ಯಕ್ರಮ ಆಯೋಜನೆಯ ಉದ್ದೇಶ ವಿವರಿಸಿ, ಮೊಬೈಲ್ ನೋಡುತ್ತಲೇ ಕುಳಿತುಕೊಳ್ಳುವ ಮಕ್ಕಳು ಇಂಥ ಕಾರ್ಯಕ್ರಮಗಳಿಂದ ಹೊರಜಗತ್ತಿನ ಸಂಪರ್ಕ ಪಡೆಯಲು ಸುಲಭವಾಗುತ್ತದೆ ಎಂದರು.

ಜಾಹೀರಾತು

ಕಾರ್ಯಕ್ರಮ ಸಂಯೋಜಕಿ ದಿಶಾ, ಜೇಸಿ ಕಾರ್ಯದರ್ಶಿ ರಮ್ಯಾ ವಿನಾಯಕ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷ ಬಿ. ರಾಮಚಂದ್ರ ರಾವ್ ಸ್ವಾಗತಿಸಿದರು.ಮಹೇಶ್ ಕುಲಾಲ್ ಅವರು ನೃತ್ಯ ತರಬೇತಿ ನಡೆಸಿಕೊಟ್ಟರು. ಐದು ದಿನಗಳ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕ್ರಾಫ್ಟ್, ಕ್ಲೇ ಆರ್ಟ್ ಮತ್ತಿತರ ತರಬೇತಿ ನೀಡಲಾಗುತ್ತದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ