ಬಂಟ್ವಾಳ

ಸತ್ಯಜಿತ್ ಸುರತ್ಕಲ್ ಅವರಿಗೆ ಭದ್ರತಾ ಅಂಗರಕ್ಷಕ ಒದಗಿಸಲು ಆಗ್ರಹ

ಜಾಹೀರಾತು

ಬಂಟ್ವಾಳ: ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇವರಿಗೆ ಶುಲ್ಕ ರಹಿತ ಭದ್ರತಾ ಅಂಗರಕ್ಷಕ (ಗನ್ ಮೆನ್) ಸೌಲಭ್ಯ ಮತ್ತೆ ನೀಡಬೇಕು ಎಂದು ಬಂಟ್ವಾಳ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಆಗ್ರಹಿಸಿದೆ.

ಬಂಟ್ವಾಳ ಆಡಳಿತ ಸೌಧದಲ್ಲಿ ಬಂಟ್ವಾಳ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನವೀನ್ ಕೋಟ್ಯಾನ್ ನೇತೃತ್ವದ ನಿಯೋಗ ಬುಧವಾರ ತೆರಳಿ ಉಪ ತಹಶೀಲ್ದಾರ್ ನರೇಂದ್ರನಾಥ್ ಇವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಕೆಲವೊಂದು ಮತೀಯ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸತ್ಯಜಿತ್ ಸುರತ್ಕಲ್ ಇವರಿಗೆ ಕಳೆದ 16ವರ್ಷಗಳಿಂದ ಸರ್ಕಾರ ಶುಲ್ಕ ರಹಿತ ಅಂಗರಕ್ಷಕ (ಗನ್ ಮೆನ್) ಸೌಲಭ್ಯ ನೀಡಿತ್ತು. ಇದೀಗ ಚುನಾವಣೆ ನೆಪದಲ್ಲಿ ಏಕಾಯೇಕಿ ಈ ಸೌಲಭ್ಯ ವಾಪಾಸು ಪಡೆದು ಶುಲ್ಕ ಪಾವತಿಸಲು ಸೂಚಿಸಿರುವುದು ಖಂಡನೀಯ. ಈ ಆದೇಶ ಕೂಡಲೇ ರದ್ದುಗೊಳಿಸಿ, ಶುಲ್ಕ ರಹಿತ ಸೌಲಭ್ಯ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು. ಸಂಘದ ಪದಾಧಿಕಾರಿಗಳಾದ ಪ್ರೇಮನಾಥ್ ಕರ್ಕೇರ, ನಾರಾಯಣ ಪೂಜಾರಿ, ಸುಂದರ ಪೂಜಾರಿ ಬೋಳಂಗಡಿ, ಜಯ ಕೋಟ್ಯಾನ್, ಸತೀಶ್ ಬೈಲ, ಲೋಕೇಶ ಅಲೆತ್ತೂರು, ಅಶೋಕ್ ಪೂಜಾರಿ, ಪ್ರಭಾಕರ ಮಧ್ವ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ