ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಪರವಾಗಿ ಜನತೆ ಬೆಂಬಲ ನೀಡುತ್ತಿದ್ದು, ಉತ್ತಮವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು
ಅವರು ಕಜೆಕಾರು ಶಕ್ತಿಕೇಂದ್ರ ಯಶವಂತ ಕಜೆಕಾರು ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಮಾತನಾಡಿ, ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನೀಡಿದ ಮತ ವ್ಯರ್ಥವಾಗಿಲ್ಲ ಎಂಬ ರೀತಿಯಲ್ಲಿ ಅಭೂತಪೂರ್ವ ಅಭಿವೃದ್ಧಿ ಮಾಡಿ, ಮತದಾರರು ನೀಡಿದ ಮತಕ್ಕೆ ಬೆಲೆ ಮಹತ್ವ ನೀಡುವ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ,ನಾವೂರ ಶಕ್ತಿ ಕೇಂದ್ರದ ಅದ್ಯಕ್ಷ ಚಿದಾನಂದ ರೈ ಕಕ್ಯ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕ್ಷೇತ್ರದ ಕಾರ್ಯದರ್ಶಿ ರಮನಾಥ ರಾಯಿ, ಶಕ್ತಿ ಕೇಂದ್ರದ ಪ್ರಮುಖರಾದ ದಿನೇಶ್ ಜೆಕ್ಯಾಂರ್ ಸುರೇಶ್ ಬಾರ್ದೊಟ್ಟು, ಶಕ್ತಿ ಕೇಂದ್ರದ ಉಪಾಧ್ಯಕ್ಷ ಹರೀಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…