ಬಂಟ್ವಾಳ

ಸರಪಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಜಾಹೀರಾತು

ಬಂಟ್ವಾಳ: ಸರಪಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆ ಇಂದು ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಯು, ದೇವರ ಆಶೀರ್ವಾದ ಮತದಾರರು,ಕಾರ್ಯಕರ್ತರು  ನೀಡಿದ ಸಹಕಾರದಿಂದ ಬಂಟ್ವಾಳದಲ್ಲಿ ಅಭೂತಪೂರ್ವ ಅಭಿವೃದ್ಧಿ ಸಾಧಿಸಲು ಸಾಧ್ಯವಾಯಿತು ಎಂದರು. ಮುಂದಿನ ಅವಧಿಯಲ್ಲಿ ಮತ್ತೆ ಶಾಂತಿಯ ಬಂಟ್ವಾಳವಾಗಿ ಉಳಿಯಲು ಬಿಜೆಪಿ ಅಧಿಕಾರಕ್ಕೆ ಬರಬೇಕು, ಅದಕ್ಕಾಗಿ ಕಾರ್ಯಕರ್ತರು ಜತೆಯಾಗಿ ಕೆಲಸ ಮಾಡಿ ಎಂದು ಹೇಳಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ ಕಳೆದ ಐದು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರತಿ ಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು.   ಶಾಸಕ ರಾಜೇಶ್ ನಾಯ್ಕ್ ಅವರ ವ್ಯಕ್ತಿತ್ವವನ್ನು ಹಾಗೂ ಮಾನವೀಯ ಗುಣಗಳ ಬಗ್ಗೆ ಮತದಾರರಿಗೆ ತಿಳಿಸುವ ಅಗತ್ಯವಿದೆ ಎಂದರು. ಬೋಗಸ್ ಗ್ಯಾರಂಟಿ ಕಾರ್ಡ್ ನ್ನು ಕಾಂಗ್ರೆಸ್ ಮನೆಮನೆಗೆ ಹಂಚುತ್ತಿದೆ,   ಸುಳ್ಳು ಅಪಪ್ರಚಾರಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು. ಸರಪಾಡಿ ಶಕ್ತಿ ಕೇಂದ್ರದ ಪ್ರಮುಖ್  ದಯಾನಂದ ಶೆಟ್ಟಿ, ಮುನ್ನಲಾಯಿ, ಸರಪಾಡಿ ಶಕ್ತಿ ಕೇಂದ್ರದ  ಪ್ರಭಾರಿ ಸುರೇಶ್ ಕುಲಾಲ್, ಸರಪಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ  ಲೀಲಾವತಿ ಧರ್ಣಪ್ಪ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts