ಅನಂತಾಡಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆ

ಜಾಹೀರಾತು

“ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಪರಿಮಳ ಮಹೇಶ್ ರಾವ್ ಚೇಳಾರು ಅಭಿಪ್ರಾಯಪಟ್ಟರು.

ಅನಂತಾಡಿ ಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದ ಉದ್ಘಾಟನೆಯನ್ನು 7ನೇ ತರಗತಿ ವಿದ್ಯಾರ್ಥಿ ರಚನ್ ಅಶ್ವತ್ತಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾದ NS CDF ನ ಅಧ್ಯಕ್ಷರು ಹಾಗೂ ಜಿಲ್ಲಾ ಘಟಕರ ಗೌರವ ಸಲಹೆಗಾರರಾದ ಗಂಗಾಧರ ಗಾಂಧಿ, ತಾಲೂಕು ಘಟಕದ ಗೌರವ ಸಲಹೆಗಾರರಾದ ರಮೇಶ ಎಂ ಬಾಯಾರು , ಜಯಾನಂದ ಪೆರಾಜೆ ಹಾಗೂ ಬಾಲಕೃಷ್ಣ ಕಾರಂತ್ ಅಳಿಕೆ , ಮುಖ್ಯ ಶಿಕ್ಷಕರಾದ ಜಯಂತಿ , ಎಸ್. ಡಿ .ಎಂ . ಸಿ ಅಧ್ಯಕ್ಷರಾದ ವಿವೇಕಾನಂದ ಶೆಟ್ಟಿ , ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಶಿವಪ್ರಸಾದ್‌ ಕೊಕ್ಕಡ ಹಾಗೂ ಕಾರ್ಯದರ್ಶಿ ರೇಖಾ ಸುದೇಶ್ ರಾವ್ ಇವರು ಶುಭ ಹಾರೈಸಿದರು.

ಮಕ್ಕಳ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಪರಿಷತ್ತಿನ ಪದಾಧಿಕಾರಿಗಳಾದ ಮಲ್ಲಿಕಾ ಜ್ಯೋತಿಗುಡ್ಡೆ , ರಶ್ಮಿತಾ ಸುರೇಶ್ , ಗೀತಾ ಕೊಂಕೋಡಿ, ಎಂ.ಡಿ ಮಂಚಿ, ತೇಜಸ್ವಿ ಅಂಬೆಕಲ್ಲು, ಅನಿಲ ವಡಗೇರಿ , ಮುತ್ತುರಾಜ್ ಮಲ್ಲಿಗವಾಡ, ವಿಜಯಾ ಶೆಟ್ಟಿ ಸಾಲೆತ್ತೂರು , ಜಯರಾಮ ಪಡ್ರೆ , ಚಿಗುರೆಲೆ ಬಳಗದ ನಾರಾಯಣ ಕುಂಬ್ರ , ಶಶಿಧರ ಏಮಾಜೆ ಹಾಗೂ ಶಿಕ್ಷಕರಾದ ಯಶೋಧಾ, ಆಶಾಲತಾ, ಸ್ವಾತಿ , ಚಿತ್ರಾಕ್ಷಿಯವರು ನಿರ್ವಹಿಸಿದರು

ತಾಲೂಕು ಘಟಕದ ನೂತನ ಅಧ್ಯಕ್ಷರಾದ ಶ್ರೀಕಲಾ ಕಾರಂತ್ ಅಳಿಕೆಯವರು ಪರಿಷತ್ತಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ತಾಲೂಕು ಘಟಕದ ಯಶಸ್ಸಿಗಾಗಿ ಎಲ್ಲರ ಸಹಕಾರ ಕೋರಿದರು. ವಲಯ ಸಂಘಟಕರಾದ ತುಳಸಿ ಕೈರಂಗಳ್ ರವರು ಸ್ವಾಗತಿಸಿದರು. ರಾಧಾಕೃಷ್ಣ ಮೂಲ್ಯ ಅಮ್ಟೂರ ರವರು ವಂದಿಸಿದರು. ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನಂತಾಡಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*