ಬಂಟ್ವಾಳ

ಅನಂತಾಡಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆ

ಜಾಹೀರಾತು

“ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಪರಿಮಳ ಮಹೇಶ್ ರಾವ್ ಚೇಳಾರು ಅಭಿಪ್ರಾಯಪಟ್ಟರು.

ಅನಂತಾಡಿ ಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದ ಉದ್ಘಾಟನೆಯನ್ನು 7ನೇ ತರಗತಿ ವಿದ್ಯಾರ್ಥಿ ರಚನ್ ಅಶ್ವತ್ತಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾದ NS CDF ನ ಅಧ್ಯಕ್ಷರು ಹಾಗೂ ಜಿಲ್ಲಾ ಘಟಕರ ಗೌರವ ಸಲಹೆಗಾರರಾದ ಗಂಗಾಧರ ಗಾಂಧಿ, ತಾಲೂಕು ಘಟಕದ ಗೌರವ ಸಲಹೆಗಾರರಾದ ರಮೇಶ ಎಂ ಬಾಯಾರು , ಜಯಾನಂದ ಪೆರಾಜೆ ಹಾಗೂ ಬಾಲಕೃಷ್ಣ ಕಾರಂತ್ ಅಳಿಕೆ , ಮುಖ್ಯ ಶಿಕ್ಷಕರಾದ ಜಯಂತಿ , ಎಸ್. ಡಿ .ಎಂ . ಸಿ ಅಧ್ಯಕ್ಷರಾದ ವಿವೇಕಾನಂದ ಶೆಟ್ಟಿ , ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಶಿವಪ್ರಸಾದ್‌ ಕೊಕ್ಕಡ ಹಾಗೂ ಕಾರ್ಯದರ್ಶಿ ರೇಖಾ ಸುದೇಶ್ ರಾವ್ ಇವರು ಶುಭ ಹಾರೈಸಿದರು.

ಮಕ್ಕಳ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಪರಿಷತ್ತಿನ ಪದಾಧಿಕಾರಿಗಳಾದ ಮಲ್ಲಿಕಾ ಜ್ಯೋತಿಗುಡ್ಡೆ , ರಶ್ಮಿತಾ ಸುರೇಶ್ , ಗೀತಾ ಕೊಂಕೋಡಿ, ಎಂ.ಡಿ ಮಂಚಿ, ತೇಜಸ್ವಿ ಅಂಬೆಕಲ್ಲು, ಅನಿಲ ವಡಗೇರಿ , ಮುತ್ತುರಾಜ್ ಮಲ್ಲಿಗವಾಡ, ವಿಜಯಾ ಶೆಟ್ಟಿ ಸಾಲೆತ್ತೂರು , ಜಯರಾಮ ಪಡ್ರೆ , ಚಿಗುರೆಲೆ ಬಳಗದ ನಾರಾಯಣ ಕುಂಬ್ರ , ಶಶಿಧರ ಏಮಾಜೆ ಹಾಗೂ ಶಿಕ್ಷಕರಾದ ಯಶೋಧಾ, ಆಶಾಲತಾ, ಸ್ವಾತಿ , ಚಿತ್ರಾಕ್ಷಿಯವರು ನಿರ್ವಹಿಸಿದರು

ತಾಲೂಕು ಘಟಕದ ನೂತನ ಅಧ್ಯಕ್ಷರಾದ ಶ್ರೀಕಲಾ ಕಾರಂತ್ ಅಳಿಕೆಯವರು ಪರಿಷತ್ತಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ತಾಲೂಕು ಘಟಕದ ಯಶಸ್ಸಿಗಾಗಿ ಎಲ್ಲರ ಸಹಕಾರ ಕೋರಿದರು. ವಲಯ ಸಂಘಟಕರಾದ ತುಳಸಿ ಕೈರಂಗಳ್ ರವರು ಸ್ವಾಗತಿಸಿದರು. ರಾಧಾಕೃಷ್ಣ ಮೂಲ್ಯ ಅಮ್ಟೂರ ರವರು ವಂದಿಸಿದರು. ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ದೇವಸ್ಥಾನಗಳ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವುದು ಸಮಾಜದ ಜವಾಬ್ದಾರಿ: ಕಶೆಕೋಡಿ ಸೂರ್ಯನಾರಾಯಣ ಭಟ್

+++++++++++++++++++++++++++ ಪದ್ಯಾಣದ ಮಣ್ಣಿನಲ್ಲಿ ಸಂಸ್ಕೃತಿ ಇದೆ: ಗುರ್ಮೆ ಸುರೇಶ್ ಶೆಟ್ಟಿ (more…)

11 hours ago

ಪದ್ಯಾಣ ಬ್ರಹ್ಮಕಲಶೋತ್ಸವ: ಏಪ್ರಿಲ್ 2ರಂದು ಏನೇನು ಕಾರ್ಯಕ್ರಮ ಇವೆ?

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)

24 hours ago