ಪರವಾನಗಿ ಇಲ್ಲದೆ ಅಕ್ಕಿ ದಾಸ್ತಾನು: ಲಕ್ಷಾಂತರ ರೂ ಮೌಲ್ಯದ ಸೊತ್ತು ವಶ

ಪರವಾನಗಿ ಇಲ್ಲದೆ ಅಕ್ಕಿ ಸಾಗಿಸುತ್ತಿರುವುದನ್ನು ಉಕ್ಕುಡ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಪೊಲೀಸ್ ಎಸ್.ಐ. ಮತ್ತು ತಂಡ ಪತ್ತೆಹಚ್ಚಿದ್ದು, ಬಳಿಕ ಮರಕ್ಕಿಣಿಯ ಹನೀಫ್ ಎಂಬವರ ಗೋಡೌನ್ ಗೆ ತೆರಳಿ ಅಲ್ಲಿ ಯಾವುದೇ ದಾಖಲಾತಿಗಳಿಲ್ಲದ 3.3 ಲಕ್ಷ ರೂ ಮೌಲ್ಯದ ಒಟ್ಟು 200 ಅಕ್ಕಿಚೀಲಗಳನ್ನು ಹಾಗೂ 3 ಲಕ್ಷ ರೂ ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 6.3 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಜಾಹೀರಾತು

ವಿಟ್ಲ ಎಸ್.ಐ. ಸಂದೀಪ್ ಕುಮಾರ್ ಶೆಟ್ಟಿ ಮತ್ತು ತಂಡ ಸಿಬ್ಬಂದಿ ಜೊತೆ ಕುದ್ದುಪದವು, ಮರಕ್ಕಿಣಿಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಕ್ಕುಡ ಚೆಕ್ ಪೋಸ್ಟ್ ನಲ್ಲಿ ವಾಹನವೊಂದನ್ನು ತಪಾಸಣೆ ಮಾಡಿದಾಗ, ಅದರಲ್ಲಿದ್ದ ವಾಹನ ಚಾಲಕ ಮಹಮ್ಮದ್ ಆಲಿ ವಿಚಾರಣೆ ನಡೆಸಿದ್ದಾರೆ. ವಾಹನ ಪರಿಶೀಲನೆ ಸಂದರ್ಭ 50 ಕೆಜಿಯ 20 ಚೀಲಗಳಿದ್ದು, ಇದನ್ನು ಕೇಪು ಗ್ರಾಮದ ಮರಕ್ಕಿಣಿಯಲ್ಲಿನ ಹನೀಫ್ ಅವರಿಗೆ ಸೇರಿದ ಗೋಡೌ ನ್ ಗೆ ಸಾಗಿಸುತ್ತಿರುವುದಾಗಿ ತಿಳಿಸಿದ್ದು ಅದರಂತೆ ಮರಕ್ಕಿಣಿಗೆ ತೆರಳಿ,ಗೋಡೌನನ್ನು ಪರಿಶೀಲಿದ್ದು, ಗೋಡೌನ್ನಲ್ಲಿ ಸುಮಾರು ತಲಾ 50 ಕೆ.ಜಿ ತೂಕದ 180 ಚೀಲಗಳಲ್ಲಿ  ಒಟ್ಟು 9 ಟನ್ ತೂಕದ ಅಕ್ಕಿಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಯಾ ದಾಖಲಾತಿಗಳಿಲ್ಲದೇ ಸಂಗ್ರಹಿಸಿಟ್ಟಿರುವುದು ಕಂಡು ಬಂದಿದೆ. ಹಾಗೂ ವಾಹನದಲ್ಲಿದ್ದ ತಲಾ 50 ಕೆ.ಜಿ ಯ 20 ಚೀಲಗಳು, ಒಟ್ಟು ತೂಕ 1 ಟನ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪರವಾನಗಿ ಇಲ್ಲದೆ ಅಕ್ಕಿ ದಾಸ್ತಾನು: ಲಕ್ಷಾಂತರ ರೂ ಮೌಲ್ಯದ ಸೊತ್ತು ವಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*