ಬಂಟ್ವಾಳ: ಅಪಾಯಕಾರಿ ಮಾರ್ಗ ಎಚ್ಚರ ಎಂಬ ಸೂಚನೆ, ರಸ್ತೆಯಲ್ಲಿ ವೇಗ ತಡೆಗೆ ವ್ಯವಸ್ಥೆ ಕಲ್ಪಿಸಿದರೂ ಬಂಟ್ವಾಳದ ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಅಪಘಾತಗಳು ನಿಂತಿಲ್ಲ. ನಿನ್ನೆ ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಸಾವನ್ನಪ್ಪಿದವರು.
ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದವರಾದ ಇವರು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…