ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಡಾ.ಸಿ.ಕೃಷ್ಣಶಾಸ್ತ್ರಿ ಮೂಡಂಬೈಲು ಕಡಬ ಇವರಿಗೆ ಹುಟ್ಟೂರ ಅಭಿನಂದನೆ ಕಾರ್ಯಕ್ರಮ ನಡೆಯಲಿದ್ದು, ಇದೇ ವೇಳೆ ಹನುಮಗಿರಿ ಮೇಳದಿಂದ ಯಕ್ಷಗಾನ ಬಯಲಾಟವೂ ಇರಲಿದೆ. ಏ.15ರಂದು ಸಂಜೆ 6.30ಕ್ಕೆ ಮೂಡಂಬೈಲು ಶ್ರೀ ಮಹಿಷಮರ್ದಿನಿ ಭಜನಾ ಮಂದಿರ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣವನ್ನು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯ ಕೆ.ಯಶವಂತ ರೈ ಮಾಡಲಿದ್ದಾರೆ. ಈ ಸಂದರ್ಭ ಹನುಮಗಿರಿ ಮೇಳದ ಮಾನಿಷಾದ ಯಕ್ಷಗಾನ ಪ್ರದರ್ಶನ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…