ಬಂಟ್ವಾಳ

ಸಂಪಾಜೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್, ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು

ಸುಳ್ಯದಿಂದ ಮಡಿಕೇರಿಗೆ ತೆರಳುವ ರಸ್ತೆಯಾದ ಸಂಪಾಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.

ಜಾಹೀರಾತು

ಮಂಡ್ಯ ಕಡೆಯ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕೊಡಗು ಜಿಲ್ಲೆಯ ಗಡಿಭಾಗವಾದ ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಪುರುಷ ಮತ್ತು ಒಂದು ಮಗು ಗಂಭೀರ ಗಾಯಗೊಂಡಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದವರೂ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಾಗಿದೆ. ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರ ಹಾಗೂ ಗಾಯಾಳುಗಳ ವಿಳಾಸ ಇನ್ನಷ್ಟೇ ತಿಳಿದುಬರಬೇಕಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಉಪಠಾಣೆಯಲ್ಲಿ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ