ಬಂಟ್ವಾಳ ಎಸ್.ಡಿ.ಪಿ.ಐ. ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮಪತ್ರ ಸಲ್ಲಿಕೆ

ಜಾಹೀರಾತು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಕಾಲ್ನಡಿಗೆಯ ಜಾಥಾ ಮೂಲಕ ಬಂಟ್ವಾಳ ಆಡಳಿತ ಸೌಧದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಚುನಾವಣಾ ವೀಕ್ಷಕ ವಿ ಎಂ ಫೈಝಲ್,  ಬಂಟ್ವಾಳ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ, ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಚುನಾವಣಾ ಉಸ್ತುವಾರಿ ಶಾಹುಲ್ ಹಮೀದ್ ಎಸ್‌ಎಚ್ ಉಪಸ್ಥಿತರಿದ್ದರು. ಇದೇ ಸಂದರ್ಭ ಅಬ್ದುಲ್ ಮಜೀದ್ ಖಾನ್ ಅವರೂ ನಾಮಪತ್ರ ಸಲ್ಲಿಸಿದರು.

ಜಾಹೀರಾತು

ಕಾಲ್ನಡಿಗೆ ಜಾಥಾ ಕ್ಕೂ ಮುನ್ನ ಎಸ್ ಡಿ ಪಿ ಐ ‘ಜನಮಿಡಿತ ಪ್ರಣಾಳಿಕೆ’ ಯನ್ನು ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರದ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ವಿ ಎಮ್ ಫೈಝಲ್ ಬಿಡುಗಡೆಗೊಳಿ ಮಾತನಾಡಿ, ಇಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡುವ ಬಿಜೆಪಿ ಮತ್ತು ನಕಲಿ ಜಾತ್ಯಾತೀತರೆನ್ನುವ ಕಾಂಗ್ರೆಸ್,ಜೆಡಿಎಸ್ ಪಕ್ಷಗಳಿಗೆ ಇಲ್ಲಿನ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು.

ಜಾಹೀರಾತು

ಉಳ್ಳಾಲ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಮಾತನಾಡಿ ‘ ಇಲ್ಲಿ ಈ ಹಿಂದೆ ಆಳಿದ ಎರಡೂ ಪಕ್ಷಗಳ ತಾರತಮ್ಯದ ರಾಜಕಾರಣಕ್ಕೆ ಬೇಸತ್ತ ಬಂಟ್ವಾಳದ ಜನತೆ ಪರ್ಯಾಯ ಪಕ್ಷವನ್ನಾಗಿ ಎಸ್ ಡಿ ಪಿ ಐ ಯನ್ನು ಆರಿಸಲಿದ್ದಾರೆ ಎಂದರು.

ಅಭ್ಯರ್ಥಿ ಇಲ್ಯಾಸ್ ತುಂಬೆ ಮಾತನಾಡಿ ಬಂಟ್ವಾಳದಲ್ಲಿ ರಾಜಕೀಯ ಧೋರಣೆಯಿಂದ ಕೂಡಿರುವ ಅಳುಕನ್ನು ಶುದ್ಧಿಗೊಳಿಸಲು ಎಸ್ ಡಿ ಪಿ ಐ ಸನ್ನದ್ಧವಾಗಿದೆ ಎಂದರು.

ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಮಜೀದ್ ಖಾನ್ ‘ ಬಂಟ್ವಾಳ ಕ್ಷೇತ್ರವನ್ನಿ ಇಡೀ ರಾಜ್ಯಕ್ಕೆ ಮಾದರಿಯಾಗುವ ತಾಲೂಕನ್ನಾಗಿ ಮಾಡಲಾಗುವುದು ಎಂದರು.

ಜಾಹೀರಾತು

ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ನಾಯಕರಾದ ಅಕ್ಬರ್ ಅಲಿ ಪೊನ್ನೋಡಿ, ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯೆ ಹಾಗೂ ಬಂಟ್ವಾಳ ಪುರಸಭಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ,  ರಾಜ್ಯ ನಾಯಕಿಯರುಗಳಾದ  ಶಾಹಿದಾ, ನಸ್ರಿಯಾ, ಎಸ್ ಡಿ ಪಿ ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು,  ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲಾ ಸಮಿತಿ ಸದಸ್ಯರುಗಳಾದ ಅಶ್ರಫ್ ಅಡ್ಡೂರು,ಯೂಸುಫ್ ಆಲಡ್ಕ,  ಶಾಹಿದಾ ತಸ್ನೀಮ್, ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ, ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಪಕ್ಷದ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಕ್ಷೇತ್ರ ಉಪಾಧ್ಯಕ್ಷ ಅನ್ವರ್ ಬಡಕಬೈಲ್, ಕ್ಷೇತ್ರ ಸಮಿತಿ ಸದಸ್ಯೆ ಝಹನಾ, ಎಸ್ ಡಿ ಪಿ ಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಎಸ್ ಡಿ ಪಿ ಐ ನಾಯಕ ಇಕ್ಬಾಲ್ ಐ ಎಮ್ ಆರ್, ಬಂಟ್ವಾಳ ಪುರಸಭಾ ಸದಸ್ಯರುಗಳಾದ ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ,ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಬೀನಾ ನಂದಾವರ, ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿ,ಧನ್ಯವಾದಗೈದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಎಸ್.ಡಿ.ಪಿ.ಐ. ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮಪತ್ರ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*