ಬಂಟ್ವಾಳ

ಯಕ್ಷಧ್ರುವ ಪಟ್ಲ ಫೌಂಡೇಶನ್: ಸರಪಾಡಿ ಘಟಕ ವಾರ್ಷಿಕೋತ್ಸವ

ಜಾಹೀರಾತು

ಬಂಟ್ವಾಳ: ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್ , ಸರಪಾಡಿ ಘಟಕ ಸಮಿತಿಯ ವತಿಯಿಂದ 6ನೇ  ವಾರ್ಷಿಕೋತ್ಸವ ಕಾರ್ಯಕ್ರಮ ಎ.18ರಂದು ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಭಾಗವತ ಸತೀಶ್ ಶೆಟ್ಟಿ ಪಟ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲಾವಿದರ ಬೆಳವಣಿಗೆಗೆ ಸರಪಾಡಿಯ ಕೊಡುಗೆ ಮಹತ್ತರವಾಗಿದೆ. ಕಲಾಭಿಮಾನಿಗಳ ಪ್ರೀತಿ, ಪ್ರೋತ್ಸಾಹದಿಂದ ಯಕ್ಷಗಾನ  ಬೆಳೆಯಲು ಸಾಧ್ಯವಾಗಿದೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರು ಮಾತನಾಡಿ, ಸತೀಶ್ ಶೆಟ್ಟಿ ಪಟ್ಲ ಅವರ ನೇತೃತ್ವದಲ್ಲಿ ಯಕ್ಷಗಾನ ಕಲಾವಿದರಿಗೆ ಭರವಸೆಯ ಬೆಳಕು ನೀಡಿ ಮುನ್ನಡೆಸುವ ಕಾರ್ಯ ಮಾಡುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ  ಯಕ್ಷಗಾನ ಸಾಧಕರಾದ ಸರಪಾಡಿ ಅಶೋಕ ಶೆಟ್ಟಿ, ದಿನೇಶ ಶೆಟ್ಟಿ ಕಾವಳಕಟ್ಟೆ ಮತ್ತು  ಯಕ್ಷಾಭಿಮಾನಿ ಗೋಪಿ ಮುನ್ನಲಾಯಿಪದವು ಅವರನ್ನು ಸಮ್ಮಾನಿಸಲಾಯಿತು. ಸರಪಾಡಿ ಘಟಕ  ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ,ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನ ಆಡಳಿತ ಟ್ರಸ್ಟ್ ಸಂಚಾಲಕ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್‌ಗುತ್ತು, ಟ್ರಸ್ಟಿ ಶಿವಪ್ಪ ಪೂಜಾರಿ ಹಟದಡ್ಕ, ಭಾರತಿ ಅಮ್ಮ, ಶಿವಪ್ಪ ಪೂಜಾರಿ ಜೇಡರಬೆಟ್ಟು, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಧಾಕರ ಶೆಟ್ಟಿ, ಉದ್ಯಮಿ ಗಣೇಶ್ ಆಚಾರ್ಯ ಹಾಗು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಘಟಕ ಕಾರ್ಯದರ್ಶಿ ಧನಂಜಯ ಶೆಟ್ಟಿ ಎನ್. ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕ ಡಾ.ಬಾಲಚಂದ್ರ ಶೆಟ್ಟಿ ವಂದಿಸಿದರು. ಬಳಿಕ ಶ್ರೀ ಕ್ಷೇತ್ರ ಪಾವಂಜೆ  ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago