ಬಂಟ್ವಾಳ: ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರಾ ಅವರು ಬಂಟ್ವಾಳದ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಜೊತೆ ಮಾತುಕತೆ ನಡೆಸಿದರು.
ಜಾಹೀರಾತು
ಈ ಸಂದರ್ಭ ವಿಧಾನಸಭೆ ಚುನಾವಣೆಯಲ್ಲಿ ರಮಾನಾಥ ರೈ ಅವರು ವಿಜಯಿಯಾಗುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ರೈ ಅವರು ತನ್ನ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರು ಮರೆತಿಲ್ಲ. ಅಪಪ್ರಚಾರಗಳಿಗೆ ಕಿವಿಗೊಡದೆ, ಎಲ್ಲರನ್ನೂ ಸಮಾನವಾಗಿ ನೋಡುವ ರಮಾನಾಥ ರೈಗಳನ್ನೇ ಆರಿಸುತ್ತಾರೆ ಎಂಬ ದೃಢ ವಿಶ್ವಾಸ ವ್ಯಕ್ತಪಡಿಸಿದರು.
ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳಕ್ಕೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಭೇಟಿ, ರೈ ಜೊತೆ ಮಾತುಕತೆ"
Be the first to comment on "ಬಂಟ್ವಾಳಕ್ಕೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಭೇಟಿ, ರೈ ಜೊತೆ ಮಾತುಕತೆ"