ಅಮಾನತು ಆದೇಶ ಹಿಂಪಡೆಯಲು ವಾರದ ಗಡುವು ನೀಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ

ಬಂಟ್ವಾಳ: ಬಿಎಲ್ ಒ ಆಗಿ ಕಾರ್ಯ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಫರ್ಲಾ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು  ಹುದ್ದೆಯಿಂದ ಅಮಾನತು‌ ಮಾಡಿ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶವನ್ನು ರದ್ದು ಪಡಿಸಿ ಅವರನ್ನು ಮತ್ತೆ ಹುದ್ದೆಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲು ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ವಾರದ ಗಡುವು ನೀಡಿದೆ.

ಜಾಹೀರಾತು

ಸೋಮವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷೆ ವಿಜಯವಾಣಿ ಶೆಟ್ಟಿ ಅವರು‌ ಮಾಹಿತಿ ನೀಡಿ ಲತಾ ಅವರು ಬಿಎಲ್ ಒ ಕೆಲಸ ನಿರ್ವಹಿಸಲು ಅಸಾಧ್ಯವಾಗುತ್ತಿರುವ ಬಗ್ಗೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲೇ ಸಂಬಂಧಪಟ್ಟ ಅಧಿಕಾರಿಗಳಿಗೆಲ್ಲರಿಗೂ ಲಿಖಿತವಾಗಿ ಮತ್ತು ಖುದ್ದಾಗಿ ಪರಿಸ್ಥಿತಿಯನ್ನು ವಿವರಿಸಿದ್ದರೂ, ಜಿಲ್ಲಾಧಿಕಾರಿ ಅವರನ್ನು ಅಮಾನತು ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಸಾಕಷ್ಟು ಕೆಲಸಗಳಿದ್ದು, ಬಿಎಲ್ ಒ ಹುದ್ದೆ ನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ಮುಕ್ತಗೊಳಿಸಬೇಕೆಂದು ಹಲವು ಬಾರಿ ಮನವಿ ಮಾಡಲಾಗಿತ್ತಾದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಒತ್ತಡ ಹೇರುವುದರ ಜೊತೆಗೆ ತಮ್ಮ ಮೇಲಾಧಿಕಾರಿಯವರಿಗೆ ತಪ್ಪು ಮಾಹಿತಿಯನ್ನು ನೀಡಿ ಅಮಾನತಿಗೆ ಪ್ರೆರೇಪಿಸುತ್ತಾರೆ. ಇಲ್ಲಿ ಲತಾ ಅವರು ಕೂಡ ಬಂಟ್ವಾಳ ತಹಶೀಲ್ದಾರರಿಗೆ, ಸಿಡಿಪಿಒ ಅವರ ಮೂಲಕ ಹಾಗೂ ಖುದ್ದಾಗಿ ವಿವರಣೆ ನೀಡಿದರೂ ಅವರನ್ನು ಅಮಾನತು ಮಾಡಲಾಗಿದೆ ಎಂದರು.

ಸಂಘದ ಮೂಲಕ ಮಂಗಳವಾರವೇ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ದಾಖಲೆ ಸಹಿತ ಅವರಿಗೆ ವಿವರಣೆ ನೀಡಿ ಬಡಪಾಯಿ ಲತಾ ಅವರ ಅಮಾನತು ಆದೇಶ ವಾಪಾಸ್ ಪಡೆದು ಹುದ್ದೆಯಲ್ಲಿ‌ಮುಂದುವರಿಸಲು ಒತ್ರಾಯಿಸಲಾಗುವುದು ಅಲ್ಲದೆ ಈಗಾಗಲೇ ಸಿಡಿಪಿಒ,ಡಿ.ಡಿ ಹಾಗೂ ನಿರೂಪಣಾಧಿಕಾರಿಯವರನ್ನು ಭೇಟಿಯಾಗಿ ಚರ್ಚಿಸಿದ್ದು,ಲತಾ ಅವರಿಗಾದ ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಅಧ್ಯಕ್ಷೆ ವಿಜಯವಾಣಿ ಶೆಟ್ಟಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಜಯಶ್ರೀ,ಸುಲೋಚನಾ,ರೇಣುಕಾ ,ಲತಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ADVERTISMENT

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಮಾನತು ಆದೇಶ ಹಿಂಪಡೆಯಲು ವಾರದ ಗಡುವು ನೀಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*