ವಿಟ್ಲ

ಬಿಜೆಪಿಯ ಅಪಪ್ರಚಾರ ಯತ್ನ ವಿಫಲಗೊಳಿಸಲು ಕಾಂಗ್ರೆಸ್ ಸಜ್ಜು: ರಮಾನಾಥ ರೈ

 

ಜಾಹೀರಾತು

ಬಂಟ್ವಾಳ: ಬಿಜೆಪಿಯವರು ಕಳೆದ ಬಾರಿ ನನ್ನನ್ನು ಅಪಪ್ರಚಾರದಿಂದ ಸೋಲಿಸಿದರು. ಐದು ಸಾವಿರದಷ್ಟು ಕೋಟಿ ರೂಪಾಯಿಯ ಅಭಿವೃದ್ಧಿ, ನೆರವು ನೀಡಲು ಸಾಧ್ಯವಾದರೂ ಬಿಜೆಪಿಯ ವ್ಯವಸ್ಥಿತ ಅಪಪ್ರಚಾರದಿಂದ ಕಳೆದ ಬಾರಿ ಪರಾಭವಗೊಳ್ಳುವಂತೆ ಮಾಡಿತು. ಆದರೆ ಈಗ ಅವುಗಳನ್ನು ವಿಫಲಗೊಳಿಸಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಂಭತ್ತನೇ ಬಾರಿ ಸ್ಪರ್ಧೆಗೆ ಇಳಿದಿರುವ ರಮಾನಾಥ ರೈ, ಕನ್ಯಾನದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದ ಸಂದರ್ಭ ಮಾತನಾಡಿದರು.

ಜಾಹೀರಾತು

ಈ ಸಂದರ್ಭ ನಿಕಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪಂಚಾಯತ್ ರಾಜ್ ಜಿಲ್ಲಾ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ಕನ್ಯಾನ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮಜೀದ್ ಕನ್ಯಾನ, ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹ್ಮಾನ್, ಸದಸ್ಯ ಕೃಷ್ಣ ನಾಯ್ಕ್, ಪ್ರಮುಖರುಗಳಾದ ಮೊಯಿದಿನ್ ಮಂಡ್ಯೂರು, ಮೊಯಿದಿನ್ ಹಾಜಿ ಬೈರಿಕಟ್ಟೆ, ಗಂಗಾಧರ್ ಕನ್ಯಾನ, ಖಾಸಿಂ ಮಂಡ್ಯೂರು, ಖಾದರ್ ಡಿ.ಕೆ., ವಸಂತ ಬೆಲ್ಚಾಡ ಪಂಜಾಜೆ, ಉಸ್ಮಾನ್ ಸೆಟ್ಟಿಬೆಟ್ಟು, ಇಬ್ರಾಹಿಂ ಕೊಣಾಲೆ, ಅಬೂಬಕ್ಕರ್ ಅಂಗ್ರಿ, ಗಣೇಶ್ ಕುಮಾರ್ ಅರ್ಪಿಣಿ ಮತ್ತಿತರರು ಉಪಸ್ಥಿತರಿದ್ದರು.

ADVERTISMENT

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ