ಬಂಟ್ವಾಳ

ಕಾಂಗ್ರೆಸ್ ಅವಧಿಯಲ್ಲಿ ಶಾಂತಿ ಕದಡಿದವರು ಯಾರು ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ: ರಮಾನಾಥ ರೈ

ಬಂಟ್ವಾಳದಲ್ಲಿ ಶಾಂತಿಯಿದೆ, ಕಾಂಗ್ರೆಸ್ ಬಂದರೆ ಮತ್ತೆ ಶಾಂತಿ ಕದಡುತ್ತದೆ ಎಂದು ಬಿಜೆಪಿಯವರು ಸುಳ್ಳು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಶಾಂತಿ ಕದಡಿದವರು ಯಾರು ಎಂಬುದು ಜನತೆಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಬಂಟ್ವಾಳ ಕಸಬಾದ ನೇರಂಬೋಳ್, ಕೊಂಗ್ರಬೆಟ್ಟು, ಕೆಳಗಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.

ಜಾಹೀರಾತು

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸಿರುವುದು ನಿಮಗೆ ತಿಳಿದಿದೆ. ನಾನು ಅಭಿವೃದ್ಧಿ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದೇನೆಯೇ ಹೊರತು, ದ್ವೇಷದ ರಾಜಕಾರಣದಲ್ಲಿ ಆಸಕ್ತಿ ಹೊಂದಿಲ್ಲ ಎಂದು ಅವರು ತಿಳಿಸಿದರು.

ಬಂಟ್ವಾಳದಲ್ಲಿ ಮಿನಿ ವಿಧಾನ ಸೌಧ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ನಿರೀಕ್ಷಣ ಮಂದಿರ, ಉದ್ಯಾನವನ ಮುಂತಾದ ಹಲವು ಅಭಿವೃದ್ಧಿ ಕಾರ್ಯ ನನ್ನ ಅವಧಿಯಲಾಗಿದೆ. ಬಂಟ್ವಾಳದಿಂದ ಪುಂಜಾಲಕಟ್ಟೆ ವರೆಗೆ ರಸ್ತೆ ಅಭಿವೃದ್ಧಿ ಆಗಿದೆ. ಅದನ್ನು ದಾಟಿ ಒಂದಿಂಚು ಹೆಚ್ಚು ಕಾಮಗಾರಿ ಮಾಡಲು ಬಿಜೆಪಿಗರಿಗೆ ಆಗಿಲ್ಲ. ಕಳೆದ ಅಪಪ್ರಚಾರ ಮಾಡಿ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಆದರೆ ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ ಎಂದು ರೈ ತಿಳಿಸಿದರು.

ಬಡವರು ಇವತ್ತು ಕಣ್ಣೀರು ಹಾಕುತ್ತಿದ್ದಾರೆ. ಅವರೆಲ್ಲರ ಕಣ್ಣೀರು ಒರೆಸಲು ರಮಾನಾಥ ರೈ ಮತ್ತೊಮ್ಮೆ ಶಾಸಕರಾಗಿ ಗೆದ್ದು ಬರಬೇಕು ಎಂದು ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್ ಹೇಳಿದರು.

ಬಂಟ್ವಾಳದಲ್ಲಿ ಮತ್ತೆ ಕಾಂಗ್ರೆಸ್ ಗೆದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಯಾವುದೇ ಸ್ವಲಾಭ ಇಲ್ಲದೆ ಜನ ಸೇವೆ ಮಾಡಿದ ಜನ ನಾಯಕನಿದ್ದರೆ ರಮಾನಾಥ ರೈಗಳು ಮಾತ್ರ.ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದರು.

ಕೆಪಿಸಿಸಿ ಮುಖಂಡರುಗಳಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರುಗಳಾದ ಬಿ. ಎಚ್. ಖಾದರ್, ವಾಸು ಪೂಜಾರಿ, ಸದಾಶಿವ ಬಂಗೇರ, ಜನಾರ್ಧನ ಚೆಂಡ್ತಿಮಾರ್, ಚಂದ್ರಶೇಖರ್ ಪೂಜಾರಿ, ಅಬ್ಬಾಸ್ ಅಲಿ, ಪ್ರವೀಣ್ ಬಂಟ್ವಾಳ್, ಪ್ರವೀಣ್ ಜಕ್ರಿಬೆಟ್ಟು, ಮನೋಹರ ನೇರಂಬೋಳ್, ವಿಶ್ವನಾಥ ಗೌಡ, ರಿಯಾಜ್ ಬಂಟ್ವಾಳ, ಮಹಾಬಲ ಬಂಗೇರ, ನಡುಮನೆ ಪರಮೇಶ್ವರ್ ಸಾಲ್ಯಾನ್, ರಾಜೇಶ್ ರೊಡ್ರಿಗಸ್, ಮನೋಹರ್, ಲಿಂಗಪ್ಪ ಕುಲಾಲ್, ನಿತಿನ್, ದಯಾನಂದ, ನಾರಾಯಣ ನೇರಂಬೋಳ್, ಗಣೇಶ್ ಪೂಜಾರಿ, ವೆಂಕಪ್ಪ ಮೂಲ್ಯ, ಶ್ರೀಧರ್ ಗೌಡ, ರಾಜೀವ್ ಸಾಲ್ಯಾನ್, ಮಹಾಬಲ ನೇರಂಬೋಳ್, ಗಂಗಯ್ಯ, ಉದಯ, ಚಂದ್ರ ಪ್ರಕಾಶ್, ರಿಯಾಜ್, ರಿಯಾಜ್ ಹುಸೇನ್, ಬಶೀರ್ ಬಸ್ತಿಪಡ್ಪು, ನಾಸಿರ್ ಮತ್ತಿತರರು ಉಪಸ್ಥಿತರಿದ್ದರು.

ADVERTISMENT

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago