ಮತದಾನ ಮಾಡಿದ ಶತಾಯುಷಿ, ಬಂಟ್ವಾಳದಲ್ಲಿ ಹಿರಿಯರ ಮತಚಲಾವಣೆ ಪ್ರಕ್ರಿಯೆ ಯಶಸ್ವಿ

ಈ ಬಾರಿ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಕೋವಿಡ್ ಪೀಡಿತರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ತೆರಳಿ ಮತದಾನ ಮಾಡಿಸುವ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಎಂಬಲ್ಲಿ 100 ವರ್ಷದ ಕಲ್ಯಾಣಿ ಆಚಾರ್ಯ ಸೌಲಭ್ಯದ ಸದುಪಯೋಗ ಪಡೆದು ಮತ ಚಲಾಯಿಸಿದರು.

ಎಂಭತ್ತು ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಚುನಾವಣಾ ಆಯೋಗದ ನಿರ್ದೇಶನದಂತೆ 205- ಬಂಟ್ವಾಳ ವಿಧಾನಸಭಾ ಕ್ಷೇತ್ರದ 25 ಸೆಕ್ಟರ್ ವ್ಯಾಪ್ತಿಯಲ್ಲಿ ಅಂಚೆ ಮತದಾನ ತಂಡಗಳು ಮತದಾರರ ಮನೆಗಳಿಗೆ ತೆರಳಿದವು. ಓರ್ವ ಮೈಕ್ರೋ ವೀಕ್ಷಕರು, ಇಬ್ಬರು ಪೋಲಿಂಗ್ ಅಧಿಕಾರಿಗಳು , ಓರ್ವ ವೀಡಿಯೋ ಗ್ರಾಫರ್, ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಐದು ಮಂದಿ ಸಿಬ್ಬಂದಿಗಳ ತಂಡವು ಪ್ರತಿ ಅರ್ಹ ಮತದಾದರರ ಮನೆಗೆ ತೆರಳಿ ಮನೆಯಿಂದಲೇ ಮತದಾನ ಮಾಡಿಸುವ ಸಲುವಾಗಿ ಈ ಕ್ರಮವನ್ನು ಆಯೋಗವು ಜಾರಿ ಮಾಡಿದೆ. ಬಂಟ್ವಾಳ ವ್ಯಾಪ್ತಿಯಲ್ಲಿ ಚುನಾವಣಾ ತಂಡಗಳನ್ನು ಅಗತ್ಯ ನಿರ್ದೇಶನ ನೀಡಿ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಆಬಿದ್ ಗದ್ಯಾಲ್ , ಸಹಾಯಕ ಚುನಾವಣಾ ಅಧಿಕಾರಿ ಕೂಡಲಿಗಿ , ನೋಡಲ್ ಅಧಿಕಾರಿ ಸುನಿತಾ ಕುಮಾರಿ, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್, ಉಪತಹಶೀಲ್ದಾರ್ ಗಳಾದ ನವೀನ್ ಕುಮಾರ್, ರಾಜೇಶ್ ನಾಯ್ಕ್ , ನರೇಂದ್ರ ನಾಥ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮತದಾನ ಮಾಡಿದ ಶತಾಯುಷಿ, ಬಂಟ್ವಾಳದಲ್ಲಿ ಹಿರಿಯರ ಮತಚಲಾವಣೆ ಪ್ರಕ್ರಿಯೆ ಯಶಸ್ವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*