ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು.
ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇನೆ, ಇದರ ಜೊತೆಗೆ ಕ್ಷೇತ್ರದ ಧಾರ್ಮಿಕ ಕೇಂದ್ರಗಳಿಗೆ ಈ ಹಿಂದೆ ಕಂಡರಿಯದ ಪ್ರಮಾಣದಲ್ಲಿ ಅನುದಾನಗಳ ನೀಡಿ, ಸಂಪೂರ್ಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಕಾಂಗ್ರೇಸ್ ಹತಾಶೆಯಿಂದ ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಹಿಂದೂ ಭಾವನೆಯ ಮೇಲೆ ಪ್ರಭಾವ ಬೀರಿದೆ ಎಂದು ಹೇಳಿದ ಅವರು, ರಾಷ್ಟ್ರೀಯತೆಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಪಾಲಕ್ಕಾಡ್ ಜಿಲ್ಲಾಧ್ಯಕ್ಷ ಹರಿದಾಸ್, ರಾಜ್ಯ ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ. ಭಟ್, ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪುರಸಭೆ ಹಿರಿಯ ಸದಸ್ಯ ಗೋವಿಂದ ಪ್ರಭು, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಸಮಿತಿ ಪ್ರಮುಖರಾದ ಪ್ರಕಾಶ್ ಅಂಚನ್, ರಮನಾಥ ರಾಯಿ, ಗಣೇಶ್ ರೈ ಮಾಣಿ, ಸುರೇಶ್ ಕುಲಾಲ್, ದಿನೇಶ್ ಭಂಡಾರಿ, ಮಾದವ ಮಾವೆ, ಉದಯಕುಮಾರ್ ರಾವ್, ಶ್ರೀಧರ್ ಶೆಟ್ಟಿ ಪುಳಿಂಚ, ಪ್ರಭಾಕರ ಪ್ರಭು, ರಂಜಿತ್ ಮೈರ, ವಿವೇಕ್ ಶೆಟ್ಟಿ ನಗ್ರಿಗುತ್ತು, ಶರ್ಮಿತ್ ಜೈನ್, ಮೋಹನ್ ಪಿ.ಎಸ್, ಯಶೋಧರ ಕರ್ಬೆಟ್ಟು, ರಾಜಾರಾಮ್ ನಾಯಕ್ , ಚಂದ್ರಶೇಖರ್ ಪೂಜಾರಿ ಅಗ್ರಹಾರ್, ರಮನಾಥ ಪೈ, ಲಕ್ಮೀನಾರಾಯಣ, ನಾರಾಯಣ ಕುಲಾಲ್ ಭಂಡಾರಿಬೆಟ್ಟು,ಭಾರತಿ ಚೌಟ, ಮೀನಾಕ್ಷಿ ಕೆ.ಗೌಡ, ರೇಖಾ ಪೈ, ಶಶಿಕಲಾ , ಗೋಪಾಲ ಸುವರ್ಣ, ಗುರುದತ್ ನಾಯಕ್, ಸುಪ್ರೀತ್ ಆಳ್ವ, ಚರಣ್ ಜುಮಾದಿಗುಡ್ಡೆ, ಪುರುಷೋತ್ತಮ ಶೆಟ್ಟಿ , ಜನಾರ್ದನ ಬೊಂಡಾಲ,ರೋಶನ್ ಡಿ.ಸೋಜ, ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಪೇಟೆಯಲ್ಲಿ ರಾಜೇಶ್ ನಾಯ್ಕ್ ರೋಡ್ ಶೋ"