ಬಂಟ್ವಾಳ

ಬಂಟ್ವಾಳದಲ್ಲಿ ಯೋಗಿ ಆದಿತ್ಯನಾಥ್ ಮೆಗಾ ರೋಡ್ ಶೋ

ಬಜರಂಗದಳವನ್ನು ಬ್ಯಾನ್ ಮಾಡಲೇನಾದರೂ ಹೊರಟರೆ, ಜನರು ಖಂಡಿತಾ ಸಹಿಸೋದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳದಲ್ಲಿ ಹೇಳಿದ್ದಾರೆ. ಶನಿವಾರ ಸಂಜೆ ಬಂಟ್ವಾಳಕ್ಕೆ ಆಗಮಿಸಿ ಭರ್ಜರಿ ರೋಡ್ ಶೋ ನಡೆಸಿದರು. ಬಂಟ್ವಾಳದ ಬಸ್ತಿಪಡ್ಪು ಎಂಬಲ್ಲಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಯೋಗಿ ಆದಿತ್ಯನಾಥ್, ಬಳಿಕ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬಸ್ ನಿಲ್ದಾಣದವರೆಗೆ ನಡೆಸಿದ ರೋಡ್ ಶೋ ಬಳಿಕ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು

ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸ್ವಾಗತಿಸಿ, ಕಂಚಿನ ಹನುಮಂತನ ಪ್ರತಿಮೆಯನ್ನು ನೆನಪಿನ ಕಾಣಿಕೆಯನ್ನಾಗಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರೊಂದಿಗೆ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ರೋಡ್ ಶೋ ಗೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದೆಡೆಗೆ ಸಾಗಿದರು.  ಬಿಜೆಪಿಯ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಪಕ್ಷದ ಜಿಲ್ಲೆ, ತಾಲೂಕು ಮಟ್ಟದ ನಾನಾ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಪುರಸಭಾ ಸದಸ್ಯರು, ಪಂಚಾಯಿತಿ ಸದಸ್ಯರು, ಅಭಿಮಾನಿಗಳು ಯೋಗಿ ಆದಿತ್ಯನಾಥ್ ಜೊತೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು, 

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ