ಬಂಟ್ವಾಳ

ಜಾತ್ಯತೀತ ಪಕ್ಷಗಳಿಗೆ ಬೆಂಬಲ: ರೈತ, ಕಾರ್ಮಿಕ ಸಂಘಗಳ ನಿರ್ಧಾರ

ಬಂಟ್ವಾಳ: ರೈತಪರ ನಿರ್ಧಾರಗಳನ್ನು ಕೈಗೊಳ್ಳುವ ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡಲು ರೈತಸಂಘ ಹಾಗೂ ಕಾರ್ಮಿಕ ಸಂಘಗಳು ನಿರ್ಧರಿಸಿವೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತಸಂಘದ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಬಿಜೆಪಿಗೆ ಬೆಂಬಲ ನೀಡದೇ ಇರಲು ನಿರ್ಧರಿಸಲಾಗಿದ್ದು, ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್, ಜೆಡಿಎಸ್ ರೈತಪರವಾಗಿದ್ದರೆ, ಬಿಜೆಪಿ ರೈತವಿರೋಧಿಯಾಗಿದೆ. ರಸಗೊಬ್ಬರ ಬೆಲೆ ಏರಿಕೆಯೇ ಮೊದಲಾದ ರೈತವಿರೋಧಿ ನೀತಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿದ್ದು, 400 ಕೆವಿ ವಿದ್ಯುತ್ ಪ್ರಸರಣ ಲೈನ್ ನಲ್ಲಿ ರೈತರ ಜಮೀನಿಗೆ ತೊಂದರೆಯಾಗುವ ವಿಚಾರದ ಕುರಿತು ಆಳುವ ಪಕ್ಷದ ಜನಪ್ರತಿನಿಧಿಗಳು ಸಮರ್ಪಕ ಉತ್ತರ ನೀಡಿಲ್ಲ ಎಂದರು. ಆಯಾ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಬಿಜೆಪಿಯೇತರ ಪಕ್ಷಗಳಿಗೆ ಬೆಂಬಲ ನೀಡುವುದಾಗಿ ಅವರು ಈ ಸಂದರ್ಭ ತಿಳಿಸಿದರು. ಈ ಸಂದರ್ಭ ರೈತಸಂಘದ ಶಾಹುಲ್ ಹಮೀದ್ ಕನ್ಯಾನ, ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, ನ್ಯಾಯವಾದಿ ತುಳಸೀದಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ