ರಮಾನಾಥ ರೈ ಅವರಿಂದ ಜನಮೆಚ್ಚುವ ಕಾರ್ಯ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ

ರಮಾನಾಥ ರೈ ಬಂಟ್ವಾಳದಲ್ಲಿ ಕೆಲಸ ಮಾಡಿದ್ದಾರೆ, ಅವರು ಮಾಡಿದ ಕೆಲಸಗಳು ಕಣ್ಣೆದರು ಕಾಣಿಸುತ್ತದೆ. ಅವರು ಗೆದ್ದೇ ಗೆಲ್ಲುತ್ತಾರೆ. ಎಂದು ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಪೂಜಾರಿ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮುಖಂಡರಾದ ಶಬೀರ್ ಸಿದ್ಧಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಆಗಮಿಸಿ, ಹಿರಿಯ ನಾಯಕ ಜನಾರ್ದನ ಪೂಜಾರಿ ಆಶೀರ್ವಾದ ಪಡೆದರು.

ಜಾಹೀರಾತು

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ಪೂಜಾರಿ, ಬಂಟ್ವಾಳ ಕ್ಷೇತ್ರದಲ್ಲಿ ಶಾಸಕರಾಗಿ, ಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಆದರ್ಶಗಳನ್ನು ರಮಾನಾಥ ರೈ ಅವರು ಎತ್ತಿಹಿಡಿದಿದ್ದು, ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬ ಜನಸಾಮಾನ್ಯರನ್ನೂ ಭೇಟಿಯಾಗಿ ಅವರ ನಾಡಿಮಿಡಿತವನ್ನು ಅರಿತು ಕೆಲಸ ಮಾಡಿದ್ದಾರೆ ಎಂದರು.

ಮತದಾರರಿಗೆ ಸಂದೇಶ ನೀಡಿದ ಜನಾರ್ದನ ಪೂಜಾರಿ, ‘’ರಮಾನಾಥ ರೈ ಅವರು ಹಿಂದೆ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಹಗಲಿರುಳು ಪಕ್ಷಕ್ಕಾಗಿ ನನ್ನ ಜೀವನವನ್ನು ತೊಡಗಿಸಿಕೊಂಡಿದ್ದೆ. ಆದರೆ ಈ ವಯಸ್ಸಿನಲ್ಲಿ ತಮ್ಮನ್ನು ವೈಯಕ್ತಿಕವಾಗಿಯಾಗಲೀ, ಅಥವಾ ಸಾರ್ವಜನಿಕರನ್ನು ಭೇಟಿಯಾಗಿ ಪ್ರಚಾರ ಮಾಡಲು ಅಸಾಧ್ಯವಾದ ಕಾರಣ, ಕಾಂಗ್ರೆಸ್ ಗೆಲ್ಲಬೇಕು ಎಂಬ ಒಂದೇ ಒಂದು ಸದುದ್ದೇಶದಿಂದ ಕೆಲಸ ಮಾಡಿದ ರಮಾನಾಥ ರೈ ಅವರು ಮಾಡಿದ ಕೆಲಸ ಮತ್ತು ಶ್ರಮಕ್ಕೆ ಬೆಲೆ ನೀಡಿ, ಗೆಲ್ಲಿಸುತ್ತೀರಿ’’ ಎಂಬ ಭರವಸೆ ವ್ಯಕ್ತಪಡಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಮಾನಾಥ ರೈ ಅವರಿಂದ ಜನಮೆಚ್ಚುವ ಕಾರ್ಯ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*