ಬಿ.ಸಿ.ರೋಡ್ ನಲ್ಲಿ ಮಾಜಿ ಸಚಿವ ರಮಾನಾಥ ರೈ ರೋಡ್ ಶೋ

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಚುನಾವಣಾ ಪ್ರಚಾರದ ಭಾಗವಾಗಿ ಸೋಮವಾರ ಸಂಜೆ ರೋಡ್ ಶೋ ನಡೆಯಿತು. ಸ್ಟಾರ್ ಪ್ರಚಾರಕರಿಲ್ಲದ ರೋಡ್ ಶೋನಲ್ಲಿ ಇಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಬಂದದ್ದು ಸಂತಸ ತಂದಿದೆ ಎಂದು ಈ ಸಂದರ್ಭ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಪೊಳಲಿ ದ್ವಾರದ ಕೈಕಂಬ ಬಳಿ ಹಾಕಿದ್ದ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಐಶಾರಾಮಿ ಜೀವನ ನಡೆಸುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿಲ್ಲ. ಕ್ಷೇತ್ರದಲ್ಲಿ ಆರು ಬಾರಿ ಗೆಲ್ಲಿಸಿ ಶಾಸಕ, ಸಚಿವನನ್ನಾಗಿ ಮಾಡಿದ್ದೀರಿ. ಮತ್ತೆ 9ನೇ ಬಾರಿಗೆ ಸ್ಪರ್ಧಿಸುವ ಅವಕಾಶವನ್ನು ನೀಡಿದ್ದೀರಿ. ಈ ಋಣವನ್ನು ನಾನು ನನ್ನ ಜನ್ಮಜನ್ಮಾಂತರಕ್ಕೂ ಮರೆಯಲು ಸಾಧ್ಯವಿಲ್ಲ. ಈ ಋಣವನ್ನು ತೀರಿಸುವುದಕ್ಕಾಗಿ ಮತ್ತು ನಿಮ್ಮೆಲ್ಲರ ಸೇವೆಗಾಗಿ ಹಾಗೂ ಕ್ಷೇತ್ರದ ಜನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವುದಕ್ಕಾಗಿ ಮತ್ತೊಮ್ಮೆ ಸ್ಪರ್ಧಿಸಿದ್ದೇನೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಸತತವಾಗಿ ಅಪಪ್ರಚಾರದ ಮೂಲಕ ನನ್ನನ್ನು ಸೋಲಿಸಲಾಯಿತು. ಸೋತ ಬಗ್ಗೆ ಬೇಸರವಿಲ್ಲ. ಆದರೆ, ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ ಎಂದು ಮತ್ತೊಮ್ಮೆ ಸ್ಮರಿಸಿದರು. ನನ್ನ ರಾಜಕೀಯ ಜೀವನದಲ್ಲಿ ಪ್ರಾಮಾಣಿಕತೆಗೆ ಹೆಚ್ಚು ಒತ್ತು ನೀಡಿದವನು. ಭ್ರಷ್ಟಾಚಾರ ರಹಿತ, ಕಳಂಕ ರಹಿತ ಜೀವನ ನಡೆಸಿದವನು ಎಂದು ರೈ ತಿಳಿಸಿದರು.  ಯಾವುದೇ ಸ್ಟಾರ್ ಪ್ರಚಾರಕರು ಇಲ್ಲದೆಯೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನನ್ನೊಂದಿಗೆ ಹೆಜ್ಜೆ ಹಾಕಿದ್ದೀರಿ. ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ. ನಾಮಪತ್ರ ಸಲ್ಲಿಕೆಯ ದಿನವೇ ಸಾವಿರಾರು ಸಂಖ್ಯೆಯಲ್ಲಿ ಬಂದು ನನಗೆ ಆಶೀರ್ವದಿಸಿದಿರಿ. ಇದೀಗ ಮತ್ತೆ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿದ್ದೀರಿ. ಇನ್ನಿರುವ ಕೆಲವೇ ಗಂಟೆಗಳಲ್ಲಿ ಪ್ರತಿಯೊಬ್ಬರೂ ಶ್ರಮಪಟ್ಟು ಕಾಂಗ್ರೆಸ್ ಅನ್ನು ಬಂಟ್ವಾಳದಲ್ಲಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ರೈ ವಿನಂತಿಸಿದರು.

ಚುನಾವಣೆಯಲ್ಲಿ ಗೆದ್ದಾಗ ನಾನು ಈ ಹಿಂದೆಯೂ ಬೆಂಗಳೂರಿನಲ್ಲಿ ಉಳಿಯದೆ ನಿಮ್ಮ ಜೊತೆಗೇ ಇದ್ದು ಜನಸೇವೆ ಮಾಡಿದ್ದೇನೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನೀವು ಪ್ರೀತಿಯಿಂದ ಆಹ್ವಾನ ಕೊಟ್ಟಾಗ ಎಷ್ಟೇ ಸಮಸ್ಯೆಯಿದ್ದರೂ, ನಿಮ್ಮ ಯಾವುದೇ ಕಾರ್ಯಕ್ರಮಗಳಿಗೆ ಬಂದು, ನಿಮ್ಮೆಲ್ಲರ ಕಷ್ಟ-ಸುಖದಲ್ಲಿ ಭಾಗಿಯಾಗಿದ್ದೇನೆ ಎಂದು ರೈ ತಿಳಿಸಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿ : ಚಿಕ್ಕ ವಯಸ್ಸಿನಿಂದಲೇ ಹಿರಿಯರ ಆಶೀರ್ವಾದದೊಂದಿಗೆ ಜನಸೇವೆ ಮಾಡಿಕೊಂಡು ಬಂದವನು. ಎಲ್ಲಾ ಜಾತಿ-ಧರ್ಮದ ಜನರ ಪ್ರೀತಿಯನ್ನು ಪಡೆದವನು. ಯಾವುದೇ ಜಾತಿ-ಧರ್ಮಗಳ ನಡುವೆ ಯಾವುದೇ ತಾರತಮ್ಯ ಮಾಡಿದವನಲ್ಲ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಚಾರವನ್ನು ಪ್ರತಿಪಾದಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿ ನಾನು. ಕುವೆಂಪು, ಅಂಬೇಡ್ಕರ್, ಬಸವಣ್ಣರ ಚಿಂತನೆಯಡಿ ಬದುಕಿ ತೋರಿಸಿದವನು. ಆ ನಿಟ್ಟಿನಲ್ಲಿ ಜನರನ್ನು ಪ್ರೀತಿಸಿದವನು ಎಂದು ರೈ ತಿಳಿಸಿದರು.

ರಮಾನಾಥ ರೈ ಮಾತನಾಡಿದರು.

ವೇದಿಕೆಯಲ್ಲಿ ರಾಜಸ್ಥಾನದ ಕಾಂಗ್ರೆಸ್ ಮುಖಂಡ ಆಬಿದ್ ಕಾಗ್ಝಿ ಉಪಸ್ಥಿತರಿದ್ದರು. ಹಿರಿಯ ಮುಖಂಡರಾದ ಬಿ.ಎಚ್. ಖಾದರ್, ಅಶ್ವನಿ ಕುಮಾರ್ ರೈ, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ಪ್ರಮುಖರುಗಳಾದ ಪದ್ಮಶೇಖರ್ ಜೈನ್, ಮೊಹಮ್ಮದ್ ಶರೀಫ್, ಲುಕ್ಮಾನ್ ಬಂಟ್ವಾಳ್, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಪಿ.ಎ. ರಹೀಂ, ಸುರೇಶ್ ಜೋರಾ, ಶಬೀರ್ ಸಿದ್ದಕಟ್ಟೆ, ಜಯಂತಿ ಪೂಜಾರಿ, ಲವೀನಾ ವಿಲ್ಮಾ ಮೊರಾಸ್, ಸುಭಾಶ್ ಕೊಲ್ನಾಡು, ಜನಾರ್ಧನ ಚೆಂಡ್ತಿಮಾರ್, ವಾಸು ಪೂಜಾರಿ, ಜೊಸ್ಪಿನ್ ಡಿಸೋಜ, ಜೆಸಿಂತಾ ಡಿಸೋಜಾ, ನವಾಝ್ ಬಡಕಬೈಲ್, ಮೊಹಮ್ಮದ್ ನಂದರಬೆಟ್ಟು, ಪರಮೇಶ್ವರ ಮೂಲ್ಯ, ನಾರಾಯಣ ನಾಯ್ಕ್, ಅಣ್ಣು ಖಂಡಿಗ, ಚಂದ್ರಹಾಸ್ ನಾಯ್ಕ್, ಸಂಪತ್ ಕುಮಾರ್ ಶೆಟ್ಟಿ, ಮೋಹನ್ ಶೆಟ್ಟಿ ಪಂಜಿಕಲ್ಲು, ಮೊಹಮ್ಮದ್ ನಂದಾವರ, ಪ್ರೀತಿರಾಜ್ ದ್ರಾವಿಡ, ಇಬ್ರಾಹಿಂ ಕೈಲಾರ, ಜಗದೀಶ್ ಕೊಯಿಲ, ಪ್ರವೀಣ್ ಬಂಟ್ವಾಳ್, ಸದಾಶಿವ ಬಂಗೇರ, ಹಸೈನಾರ್ ಶಾಂತಿಅಂಗಡಿ, ಸುರೇಶ್ ಬಿ.ನಾವೂರು, ಲೋಲಾಕ್ಷ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್ ನಲ್ಲಿ ಮಾಜಿ ಸಚಿವ ರಮಾನಾಥ ರೈ ರೋಡ್ ಶೋ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*