ಬಂಟ್ವಾಳ

U.T.KADAR at BANTWAL: ಸರಕಾರ ರಚನೆಯಾದ ತಕ್ಷಣ ನಿಯಮಾನುಸಾರ ಗ್ಯಾರಂಟಿ ಅನುಷ್ಠಾನ: ಯು.ಟಿ.ಖಾದರ್ ಹೇಳಿದ್ದೇನು?

ಜಾಹೀರಾತು

ಬಂಟ್ವಾಳದಲ್ಲಿ ಬುಧವಾರ ಸಂಜೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಮುಂದಿನ ದಿನಗಳಲ್ಲಿ ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ನಿಯಮಾನುಸಾರ ಜಾರಿ ಮಾಡುತ್ತೇವೆ ಎಂದರು. ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್ ಗಿರುವ ವ್ಯತ್ಯಾಸವನ್ನು ನಾವು ತೋರಿಸಿಕೊಡುತ್ತೇವೆ ಎಂದರು.

ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ನಾಮಪತ್ರ ಸಲ್ಲಿಕೆ ಸಂದರ್ಭವೂ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೆ. ಅವರು ನನ್ನ ಅತ್ಯಂತ ಪ್ರೀತಿಯ ನಾಯಕರು. ನಾನು ಎನ್.ಎಸ್.ಯು.ಐ. ಅಧ್ಯಕ್ಷನಾಗಲು ಅವರ ಮಾರ್ಗದರ್ಶನವೇ ಕಾರಣ. ಅವರ ಪ್ರಾಮಾಣಿಕತೆ, ಪರಿಶ್ರಮ, ಸಾಮಾಜಿಕ ಬದ್ಧತೆ ನನ್ನ ರಾಜಕೀಯ ಜೀವನದಲ್ಲೂ ಪರಿಣಾಮ ಬೀರಿದೆ. ಗೆಲುವು ಸಾಧಿಸಿದ ಬಳಿಕ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಎಲ್ಲ ಕಾಂಗ್ರೆಸಿಗರನ್ನೂ ಕುಟುಂಬದ ರೀತಿಯಲ್ಲಿ ಕೊಂಡೊಯ್ಯಬೇಕು ಎಂಬ ಅವರ ಸಲಹೆ ಸ್ವೀಕರಿಸಿದ್ದೇನೆ ಎಂದರು.

ಜಾಹೀರಾತು

ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ತಾಪಂ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪ್ರಮುಖರಾದ ಸಂತೋಷ್ ಶೆಟ್ಟಿ, ಈಶ್ವರ ಉಳ್ಳಾಲ್, ಹಾಸಿರ್ ಪೇರಿಮಾರ್, ಹುಸೈನ್ ಕುಂಞಮೋನ್, ಮಲ್ಲಿಕಾ ಪಕ್ಕಳ, ಅರುಣ್ ಡಿಸೋಜಾ,ದೇವದಾಸ್ ಭಂಡಾರಿ, ದೀಪಕ್ ಪಿಲಾರ್, ಸುರೇಶ್ ಭಟ್ನಾಗರ್, ಮುಸ್ಪಾಫ ಹರೇಕಳ, ಮರಳೀಧರ ಶೆಟ್ಟಿ, ಫಾರೂಕ್ ದೇರಳ ಕಟ್ಟೆ, ನವಾಝ್ ನರಿಂಗಾಣ್, ಶಮೀರ್ ಫಜೀರ್, ದಿನೇಶ್ ಪೂಜಾರಿ, ರಝಾಕ್ ಕುಕ್ಕಾಜೆ, ಮಹನ್ಮದ್ ಮುಕ್ಕಚ್ಚೇರಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ