ಬಂಟ್ವಾಳ

ಪಾಣೆಮಂಗಳೂರಿನ ಭಯಂಕೇಶ್ವರ ದೇವಸ್ಥಾನದಲ್ಲಿ ಶಂಕರ ಜಯಂತಿ ಉತ್ಸವ ಸಮಾರೋಪ

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ದೇವಸ್ಥಾನದಲ್ಲಿ ಶ್ರೀ ಶಂಕರ ಜಯಂತಿ ಉತ್ಸವ ಸಮಾರೋಪ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಶಂಕರ ಸೇವಾ ಪ್ರತಿಷ್ಠಾನದ ಬಂಟ್ವಾಳ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 21ರ ಭಾನುವಾರ ಬೆಳಗ್ಗೆ 7 ಗಂಟೆಗೆ ರುದ್ರಯಾಗದಿಂದ ಕಾರ್ಯಕ್ರಮ ಆರಂಭಗೊಳ್ಳುತ್ತದೆ. ಬಳಿಕ ಗಮಕ ವಾಚನ, ಬೆಳಗ್ಗೆ 11 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಶ್ರೀ ಶಂಕರರ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಲಿದೆ. ಸಮಾರೋಪ ಭಾಷಣವನ್ನು ನಿವತ್ತ ಪ್ರಿನ್ಸಿಪಾಲ್ ಡಾ.ಪಾದೇಕಲ್ಲು ವಿಷ್ಣು ಭಟ್ ನೆರವೇರಿಸುವರು. ಬಳಿಕ ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.

ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ಅಂಗವಾಗಿ ಈಗಾಗಲೇ ಶ್ರೀ ಶಂಕರ ಜಯಂತಿ ಉತ್ಸವಗಳು ಆರಂಭಗೊಂಡಿದ್ದು, ಅದರ ಸಮಾರೋಪ ಇದಾಗಿದೆ ಎಂದು ಅವರು ಹೇಳಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಘಟಕದ ಪ್ರಧಾನ ಸಂಚಾಲಕ ಅನಾರು ಕೃಷ್ಣ ಶರ್ಮಾ, ಕೋಶಾಧಿಕಾರಿ ರವೀಂದ್ರ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ ಕಂದೂರು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ