ಪುತ್ತೂರಿನಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪೋಲೀಸ್ ದೌರ್ಜನ್ಯ ನಡೆಸಿದ ವಿಚಾರದ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕಾನೂನು ಮೀರಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿರುವ ಅವರು, ಈಗಾಗಲೇ ಯುವಕರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೇಲಧಿಕಾರಿಗಳು ಓರ್ವ ಎಸ್.ಐ. ಹಾಗೂ ಪೋಲೀಸ್ ಅನ್ನು ಅಮಾನತು ಮಾಡಿದ್ದಾರೆ, ಆದರೆ ಕೇವಲ ಅಮಾನತು ಸಾಲದು, ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.
ಪೋಲೀಸ್ ದೌರ್ಜನ್ಯ ಘಟನೆಗಳು ನಡೆಯಬಾರದು ಎಂದು ತಿಳಿಸಿರುವ ಅವರು ಹಿಂದು ಕಾರ್ಯಕರ್ತರ ಜೊತೆಗೆ ಯಾವತ್ತು ನಾವಿದ್ದೇವೆ , ಯಾವುದೇ ಭಯಬೇಡ ಎಂದು ಶಾಸಕ ರಾಜೇಶ್ ನಾಯ್ಕ್ ಭರವಸೆ ನೀಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ದೂರು: ಕ್ರಮ ಕೈಗೊಳ್ಳಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒತ್ತಾಯ"
Be the first to comment on "ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ದೂರು: ಕ್ರಮ ಕೈಗೊಳ್ಳಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒತ್ತಾಯ"