ಸೇವೆಯ ಮೂಲಕ ದಾರಿ ತೋರಿಸುವ ಕಾರ್ಯ ಅಗತ್ಯ: ಒಡಿಯೂರು ಶ್ರೀಗಳು

 

ಜಾಹೀರಾತು

ಬಂಟ್ವಾಳ: ಸೇವೆ ಮೂಲಕ ದಾರಿ ತೋರಿಸುವ ಕಾರ್ಯ ಆಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.‌

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಗಸ್ಟ್ 8 ರಂದು ನಡೆಯಲಿರುವ ಒಡಿಯೂರು  ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ ೨೦೨೩ ಪ್ರಯುಕ್ತ ಸಮಾಲೋಚನೆ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.‌

ಜಾಹೀರಾತು

ವ್ಯಕ್ತಿ ಮತ್ತು ಸಂಘಟನೆಯಲ್ಲಿ ಧರ್ಮ ಶ್ರದ್ಧೆ ಇದ್ದಾಗ ಪ್ರತಿಯೊಂದು ಕಾರ್ಯವೂ  ಯಶಸ್ವಿಯಾಗುತ್ತದೆ. ತ್ಯಾಗಪೂರ್ಣ ಸೇವೆ ಆಗಬೇಕು. ಸೇವೆ ಎಂಬುದು ಒಂದು ವೃತ್ತಿ, ಅದು ಕರ್ತವ್ಯ ಎಂಬ ಭಾವನೆ ನಮ್ಮಲ್ಲಿರಬೇಕು. ಸೇವೆ ಚಟುವಟಿಕೆ ನಿರಂತರ ಇರಬೇಕು. ಸೇವೆ ಮೂಲಕ ಜನರ ಮನಸ್ಸು ಗೆಲ್ಲುವ ಕೆಲಸ ಆಗಬೇಕು.  ಹುಟ್ಟು ಹಬ್ಬದ ಉದ್ದೇಶ ಸಮಾಜ ಅಭಿವೃದ್ಧಿಯಾಗಿದ್ದು, ಸೇವೆಗಳು ಸಮಾಜಮುಖಿಯಾಗಬೇಕು.‌  ಶಿಸ್ತು ಬದ್ಧವಾದ ಕಾರ್ಯಕ್ರಮ ಆಗಬೇಕು. ಪ್ರಕೃತಿ ಉಳಿಸುವ ಕಾರ್ಯದಲ್ಲಿ ಯುವ ಶಕ್ತಿ ಮುಂದೆ ಬರಬೇಕು ಎಂದರು.

ಒಡಿಯೂರು  ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ 2023ರ ಸಮಿತಿ ಅಧ್ಯಕ್ಷರಾಗಿ ಗುಜರಾತ್ ಉದ್ಯಮಿ ಶಶಿಧರ ಬಿ  ಶೆಟ್ಟಿ ಬರೋಡ ಅವರನ್ನು ಆಯ್ಕೆ ಮಾಡಲಾಯಿತು. ಸಾಧ್ವೀ ಮಾತನಾನಂದ ಮಯೀ ದಿವ್ಯ ಸಾನಿಧ್ಯ ವಹಿಸಿದ್ದರು.‌

ಜಾಹೀರಾತು

ಗ್ರಾಮೋತ್ಸವ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಒಡಿಯೂರು ವಿವಿಧೋದ್ಧೇಸ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಉಪಾಧ್ಯಕ್ಷ ಪಿ  ಲಿಂಗಪ್ಪ ಗೌಡ, ಒಡಿಯೂರು ಗುರುದೇವ ಸೇವಾ ಬಳಗದ ಅಧ್ಯಕ್ಷ ಎ ಅಶೋಕ್ ಕುಮಾರ್ ಬಿಜೈ, ನವನೀತ್ ಶೆಟ್ಟಿ ಕದ್ರಿ, ಒಡಿಯೂರು ಗ್ರಾಮವಿಕಾಸ ಯೋಜನೆಯ ನಿರ್ದೇಶಕ ಕಿರಣ್ ಉರ್ವ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ ಉಪಸ್ಥಿತರಿದ್ದರು.‌  ತುಳು ಕೂಟದ ಅಧ್ಯಕ್ಷ ಯಶವಂತ ವಿಟ್ಲ ಸ್ವಾಗತಿಸಿ, ನಿರೂಪಿಸಿದರು.‌  ಗಣಪತಿ ಭಟ್ ಸೇರಾಜೆ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸೇವೆಯ ಮೂಲಕ ದಾರಿ ತೋರಿಸುವ ಕಾರ್ಯ ಅಗತ್ಯ: ಒಡಿಯೂರು ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*