ಬಂಟ್ವಾಳ

ಬಂಟ್ವಾಳದಲ್ಲಿ ಬಿಜೆಪಿಯಿಂದ ಹಿರಿಯ ಕಾರ್ಯಕರ್ತರ ಸಭೆ, ಸಂವಾದ

ಬಂಟ್ವಾಳ: ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯ ಪರಾಮರ್ಶೆಯೇ ಮೊದಲಾದ ವಿಷಯಗಳು ಹಾಗೂ ಪಕ್ಷದ ಬೆಳವಣಿಗೆಗೆ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದವನ್ನು ನಡೆಸುತ್ತಿದ್ದು, ಅದರ ಒಂದು ಭಾಗವಾಗಿ ಬಂಟ್ವಾಳ ತಾಲೂಕಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿ ಮಾತನಾಡಿ, ಪಕ್ಷ ಕಟ್ಟಿದ ಹಿರಿಯರ ಆಶೀರ್ವಾದ ಪಡೆಯುವುದು ಮುಖ್ಯ. ಪಂಚಾಯಿತಿ ಸದಸ್ಯರಾಗಲೂ ಕಷ್ಟಪಡಬೇಕಾದ ಸ್ಥಿತಿ ಇದ್ದಾಗ ಹಂತ ಹಂತವಾಗಿ ಕಟ್ಟಿ ಬೆಳೆಸಿದವರು ಹಿರಿಯರು. ಅವರು ಹಾಕಿಕೊಟ್ಟ ಮಾರ್ಗಕ್ಕೆ ಯಾವುದೇ ಚ್ಯುತಿ ಬರದಂತೆ ಕೆಲಸ ಮಾಡುವೆ ಎಂದರು. ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ವಹಿಸಿ ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು.

ವಿಧಾನಪರಿಷತ್ತು ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಸಂವಾದ ನಡೆಸಿದರು. ನಮ್ಮ ಅಂದಿನ ಕನಸನ್ನು ನನಸಾಗಿಸಬೇಕು ಎಂದಾದರೆ, ಪಕ್ಷ ಬಲಗೊಳ್ಳಬೇಕು. ಪಕ್ಷ ಕಟ್ಟಿದವರ ಆಶಯಗಳನ್ನು ಅರಿತುಕೊಳ್ಳಬೇಕು ಎಂದರು.

ಜಾಹೀರಾತು

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ಮಂಡಲ ಹಿರಿಯರ ಪ್ರಕೋಷ್ಟದ ಸಹಸಂಚಾಲಕ ಗೋಪಾಲ ಸುವರ್ಣ ಉಪಸ್ಥಿತರಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು. ಪುರುಷೋತ್ತಮ ಶೆಟ್ಟಿ ವಾಮದಪದವು ವಂದಿಸಿದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ