‘ಗುಬ್ಬಚ್ಚಿಗೂಡು’ ನಿತ್ಯ ರಮ್ಯ ಪರಿಸರೋತ್ಸವದಲ್ಲಿ ಸಾಧಕರಿಗೆ ಸನ್ಮಾನ

ಜಾಹೀರಾತು

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ `ರೂವಾರಿ ನಿತ್ಯಾನಂದ ರಮ್ಯಾ ಶೆಟ್ಟಿ ದಂಪತಿಗಳು ತಮ್ಮಮಗಳ ನಾಮಕರಣ ಕಾರ್ಯಕ್ರಮದ ನಿಮಿತ್ತ ಮನೆ ಮನೆಗೆ ತೆರಳಿ ಗಿಡವನ್ನು ನೀಡಿ ನಾಮಕರಣ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ “ಗುಬ್ಬಚ್ಚಿಗೂಡು ನಿತ್ಯ ರಮ್ಯ ಪರಿಸರೋತ್ಸವ” ಕಾರ್ಯಕ್ರಮ ಮೆರಗುತಂದರು.

ನಾಮಕರಣ ಕಾರ್ಯಕ್ರಮದಲ್ಲಿ ಸಂಸಾರ ಜೋಡುಮಾರ್ಗ ಸದಸ್ಯರಾದ ರಾಕೇಶ್ ಆಚಾರ್ಯ ಬನಾರಿಯವರು ಪರಿಸರ ಗೀತೆಗಳನ್ನು ಹಾಡಿ ಗಮನ ಸಳೆದರು. ಕುತ್ತುಲೋಡಿ ಭವಾನಿ ಶೆಟ್ಟಿ, ಬೇಬಿಶೆಟ್ಟಿ ಮಿಜಾರ್‌ ಸಾಂಪ್ರದಾಯಿಕ ಹಾಡನ್ನು ಹಾಡಿದರು.

ಇದೇ ಸಂದರ್ಭ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿದ ಪರಿಸರ ಸಂರಕ್ಷಣೆ ವಿಭಾಗದಲ್ಲಿ ಪ್ರೊ.ರಾಜಮಣಿ ರಾಮಕುಂಜ, ವೈದ್ಯಕೀಯ ಸೇವೆಯಲ್ಲಿ ಡಾ.ದುರ್ಗಾಪ್ರಸಾದ್ ಎಂ.ಆರ್, ಹಾಗೂ ಸ್ವಚ್ಛ ಪರಿಸರ ಸ್ನೇಹಿ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಹಿ.ಪ್ರಾ ಮಜಿ ವೀರಕಂಭ ಶಾಲೆಯನ್ನು ‘”ಪ್ರಕೃತಿ ಸ್ನೇಹಿ” ಶಾಲೆಯಾಗಿ ಗುರುತಿಸಿ, ಶಾಲೆಯ ಪ್ರತಿನಿಧಿಯಾಗಿ ಆಗಮಿಸಿದ ಸಂಗೀತಾ ಶರ್ಮ ಅವರನ್ನು ಗೌರವಿಸಿದರು.

ಹೀಗೆ ತನ್ನ ಮಗಳ ನಾಮಕರಣ ಕಾರ್ಯಕ್ರಮವನ್ನು ವಿಶೇಷವಾಗಿ ವೈಭವೀಕರಣ ದ ಕಾಯ೯ಕ್ರಮಗಳ ನಡುವೆ ಈ ರೀತಿಯಾಗಿ ಅರ್ಥಪೂರ್ಣವಾಗಿ ನಡೆದ ಪರಿಸರ ಸ್ನೇಹಿ ಆಚರಣೆಯು ಜನರ ಮನಸ್ಸಿನಲ್ಲಿ ಪರಿಸರದ ಕಾಳಜಿ ಉಂಟುಮಾಡುವಲ್ಲಿ ಉತ್ತಮ ಪ್ರಯತ್ನ ಎಂದರೆ ತಪ್ಪಾಗಲಾರದು. ಇವರ ಈ ಕಾಳಜಿ ಇನ್ನಷ್ಟು ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡುವಂತಾಗಿದೆ. ಗುಬ್ಬಚ್ಚಿಗೂಡು, ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "‘ಗುಬ್ಬಚ್ಚಿಗೂಡು’ ನಿತ್ಯ ರಮ್ಯ ಪರಿಸರೋತ್ಸವದಲ್ಲಿ ಸಾಧಕರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*