ಪ್ರಮುಖ ಸುದ್ದಿಗಳು

ಅಮರನಾಥ ಯಾತ್ರೆಗೆ ತೆರಳಿದ ಬಂಟ್ವಾಳದವರೂ ಸೇರಿ ಕರಾವಳಿಗರು ಸುರಕ್ಷಿತ

ಜಾಹೀರಾತು

ಜಮ್ಮು ಮತ್ತು ಕಾಶ್ಮೀರದಲ್ಲಿ  ಮಳೆ ಮತ್ತು ಭೂಕುಸಿತ ಕಾರಣದಿಂದ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಅಲ್ಲಲ್ಲಿ ಸಿಲುಕಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯ 20 ಯಾತ್ರಾರ್ಥಿಗಳು ಸೇಫ್ ಆಗಿದ್ದೇವೆ ಎಂದು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಮಾರುತಿನಗರ ತಿಳಿಸಿದ್ದಾರೆ. ನಾವೀಗ ಸುರಕ್ಷಿತವಾಗಿದ್ದೇವೆ. ಸದ್ಯಕ್ಕೆ ಎಲ್ಲೂ ಹೋಗಲು ಆಗುತ್ತಿಲ್ಲ. ಆದರೆ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಸೇನೆಯವರು ಕ್ರಮ ಕೈಗೊಳ್ಳುತ್ತಿದ್ದಾರೆ. ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ’’ ಎಂದವರು ತಿಳಿಸಿದರು. ..ಜಿಲ್ಲೆ ಹಾಗೂ ಉಡುಪಿಯಿಂದ 20 ಮಂದಿ ಇದ್ದೇವೆ ಎಂದು ಹೇಳಿರುವ ಸಂತೋಷ್,  ನರಿಕೊಂಬಿನ ಐವರು ಸೇರಿ, ಪುತ್ಥೂರು, ಉಡುಪಿ, ಮೂಡುಬಿದಿರೆ, ಸಜಿಪ, ಉಪ್ಪಿನಂಗಡಿಗಳಿಂದ ಬಂದವರೂ ಇದ್ದಾರೆ ಎಂದರು. ಕಳೆದ ವರ್ಷವೂ ಸಂತೋಷ್ ತೆರಳಿದ್ದ ಸಂದರ್ಭ ಸಮಸ್ಯೆ ಉಂಟಾಗಿತ್ತು. ಬಳಿಕ ಸುರಕ್ಷಿತವಾಗಿ ಅವರು ಮರಳಿದ್ದನ್ನು ನೆನಪಿಸಿದರು. 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ