ಜೇಸಿ ಬಂಟ್ವಾಳ ಶ್ರಮದಾನ: ಫ್ಲೈಓವರ್ ನಿಂದ ಚಿಮ್ಮುತ್ತಿರುವ ನೀರಿನ ಸಮಸ್ಯೆಗೆ ಪರಿಹಾರ

ಬಂಟ್ವಾಳ: ವಾಹನಗಳ ಸಂಚಾರದ ವೇಳೆ ಬಿ.ಸಿ.ರೋಡಿನ ಮೇಲ್ಸೆತುವೆಯ ಮೇಲಿಂದ ಏಕಾಏಕಿ ಚಿಮ್ಮಿತ್ತಿದ್ದ ನೀರಿನ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೆಸಿಐ ಬಂಟ್ವಾಳದ ಸದಸ್ಯರು ಶನಿವಾರ ಮಧ್ಯಾಹ್ನದ ವೇಳೆಗೆ ಶ್ರಮದಾನ ನಡೆಸಿ, ಫ್ಲೈ ಓವರ್‌ನ ರಂಧ್ರಗಳಲ್ಲಿ ತುಂಬಿ ಕೊಂಡಿದ್ದ ಪ್ಲಾಸ್ಟಿಕ್ ಹಾಗೂ ಹೂಳನ್ನು ತೆರವುಗೊಳಿಸಿ ಅಲ್ಲಿ ಕೆರೆಯಂತೆ ಸಂಗ್ರಹಗೊಳ್ಳುತ್ತಿದ್ದ ನೀರನ್ನು ಸರಾಗವಾಗಿ ಹರಿದು ಹೋಗಲು ಅನುವು ಮಾಡಿಕೊಟ್ಟರು.

ಕಳೆದ ಹಲವು ದಿನಗಳಿಂದ ಬಿ.ಸಿ.ರೋಡಿನ ಹೃದಯ ಭಾಗದಲ್ಲಿ ಮೇಲ್ಸೆತುವೆಯ ಮೇಲೆ ನೀರು ಸಂಗ್ರಹಗೊಂಡು ವಾಹನಗಳು ರಭಸವಾಗಿ ಚಲಿಸುವ ವೇಳೆ ಅದು ಚಿಮ್ಮಿ ಕೆಳಭಾಗದಲ್ಲಿ ನಡೆದುಕೊಡು ಹೋಗುವ, ರಸ್ತೆದಾಟುವ ಪಾದಾಚಾರಿಗಳು, ದ್ವಿಚಕ್ರ ವಾಹನ ಸವಾರರ ಮೇಲೆ ಬಿದ್ದು ಮೈಯಿಡೀ ಒದ್ದೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಈ ಅವ್ಯವಸ್ಥೆಯ ವಿರುದ್ದ ಅನೇಕ ಮಂದಿ ಹಿಡಿಶಾಪ ಹಾಕಿದ್ದರು. ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು ಅನೇಕ ಮಂದಿ ಈ ವಿಶೇಷ ಅನುಭವವನ್ನು ಪಡೆದುಕೊಂಡಿದ್ದಾರೆ.

ಜೆಸಿಐ ಬಂಟ್ವಾಳದ ಸದಸ್ಯರಾದ ಸದಾನಂದ ಬಂಗೇರ, ಯತೀಶ್ ಕರ್ಕೇರಾ, ಕಿಶೋರ್ ಆಚಾರ್ಯ ಅವರು ಶನಿವಾರ ಸುರಿಯುವ ಮಳೆಯನ್ನು ಲೆಕ್ಕಿಸದೇ ಶ್ರಮದಾನ ನಡೆಸಿ ಫ್ಲೈ ಓವರ್‌ನ ನೀರು ಹರಿಯುವ ರಂಧ್ರಗಳಲ್ಲಿ ತುಂಬಿಕೊಂಡಿದ್ದ ಹೂಳು ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದರು. ವಾಹನಗಳಲ್ಲಿ ಸಂಚರಿಸುವ ವೇಳೆ ಎಸೆದ ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಬಾಟಲ್ ಹಾಗೂ ಮಣ್ಣು ತುಂಬಿಕೊಂಡು ನಾಲ್ಕು ರಂಧ್ರಗಳು ಮುಚ್ಚಿಹೋಗಿತ್ತು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೇಸಿ ಬಂಟ್ವಾಳ ಶ್ರಮದಾನ: ಫ್ಲೈಓವರ್ ನಿಂದ ಚಿಮ್ಮುತ್ತಿರುವ ನೀರಿನ ಸಮಸ್ಯೆಗೆ ಪರಿಹಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*