ಬಂಟ್ವಾಳ: ಅಧಿವಕ್ತಾ ಪರಿಷತ್ ನ ಬಂಟ್ವಾಳ ತಾಲೂಕು ಘಟಕ, ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಆಶ್ರಯದಲ್ಲಿ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾಹಿತಿ- ಸಂವಾದ ಕಾರ್ಯಕ್ರಮ ಆಯೋಜಿಸಲಾಯಿತು. ವಕೀಲರ ಸಂಘ (ರಿ), ಬಂಟ್ವಾಳ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರಿನ ಹಿರಿಯ ವಕೀಲರಾದ ಪರಮೇಶ್ವರ ಜೋಯಿಸ ಏಕ ರೂಪ ನಾಗರಿಕ ಸಂಹಿತೆ ಬಗ್ಗೆ ಮಾಹಿತಿ ಮತ್ತು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಅಧಿವಕ್ತಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಪುಷ್ಪಲತಾ ಯು. ಕೆ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಉಮಾ ಎನ್ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಶ್ರೀರಾಮ ಪ್ರಭು ಧನ್ಯವಾದ ಸಮರ್ಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…