ಬಂಟ್ವಾಳ ಕನ್ನಡ ಭವನದಲ್ಲಿ ಜುಲೈ 15ರಂದು ಸಮ್ಮೇಳನ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ

ಬಂಟ್ವಾಳ: ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಜ್ಞಾನ ಫಲ್ಗುಣಿಯನ್ನು ಜುಲೈ 15ರಂದು ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ ನಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳದನ ಸ್ವಾಗತ ಸಮಿತಿ ಮತ್ತು ಸಾಹಿತ್ಯ ಪರಿಷತ್ತು ಏರ್ಪಡಿಸುವ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಬಾಲಕೃಷ್ಣ ಗಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ದೀಪ ಪ್ರಜ್ವಲನ ಮಾಡುವರು. ಪೊಳಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಎ.ಮಂಜಯ್ಯ ಶೆಟ್ಟಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಪ್ರಮುಖರಾದ ಗುಂಡಿಲಗುತ್ತು ಶಂಕರ ಶೆಟ್ಟಿ, ಲುವಿಝ ಕುಟಿನ್ಹೊ, ಅಬ್ದುಲ್ ರಝಾಕ್ ಅನಂತಾಡಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, 2 ಗಂಟೆಗೆ ಜಿಲ್ಲೆಯ ಪ್ರಸಿದ್ಧ ಅರ್ಥಧಾರಿಗಳಿಂದ ‘ಶರಸೇತು ಬಂಧನ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಜಬ್ಬಾರ್ ಸಮೋ, ದಿನೇಶ್ ಶೆಟ್ಟಿ ಅಳಿಕೆ, ಸಂಕಪ್ಪ ಶೆಟ್ಟಿ ಬಿ.ಸಿ.ರೋಡ್ ಅರ್ಥಧಾರಿಗಳಾಗಿ, ಮುಳಿಯಾಲ ಗಿರೀಶ್ ಭಟ್, ಜಯರಾಮ ಪಡ್ರೆ, ವೆಂಕಟೇಶ ಶೆಟ್ಟಿ ಮೂರ್ಜೆ ಮತ್ತು ಜಗದೀಶ ಮಂಗಲ್ಪಾಡಿ ಹಿಮ್ಮೇಳದಲ್ಲಿ ಭಾಗವಹಿಸುವರು.  ಬಳಿಕ ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕನ್ನಡ ಭವನದಲ್ಲಿ ಜುಲೈ 15ರಂದು ಸಮ್ಮೇಳನ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*