ಬೀಡಿ ಕಾರ್ಮಿಕರ ತುಟ್ಟಿಬತ್ತೆ ಹಾಗೂ ಕನಿಷ್ಠ ಕೂಲಿ ಆಗ್ರಹಿಸಿ ಪ್ರತಿಭಟನೆ

ಎಸ್ .ಕೆ ಬೀಡಿ ವರ್ಕರ್ಸ್ ಫೆಡರೇಶನ್(ಎಐಟಿಯುಸಿ) ನೇತೃತ್ವದಲ್ಲಿ ಜಿಲ್ಲಾವ್ಯಾಪಿ ಹಕ್ಕೊತ್ತಾಯ ಚಳುವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಸಿರೋಡಿನ ಬೀಡಿ ಸಂಸ್ಥೆಗಳೆದುರು ತುಟ್ಟಿಬತ್ತೆ ಹಾಗೂ ಕನಿಷ್ಠ ಕೂಲಿ ಜ್ಯಾರಿಗೊಳಿಸುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದ ಯೂನಿಯನ್ ಗಳಾದ ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್ ಹಾಗೂ ಬಂಟ್ವಾಳ ತಾಲೂಕು ಬೀಡಿ ಎಂಡ್ ಜನರಲ್ ಲೇಬರ್ ಯೂನಿಯನ್ ನ ನೇತೃತ್ವದಲ್ಲಿ ಬೀಡಿ ಕಾರ್ಮಿಕರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು.

ಜಾಹೀರಾತು

ಕೋರ್ಟು ಆದೇಶದಂತೆ ಬಾಕಿ ತುಟ್ಟಿಭತ್ತೆ ಮೊತ್ತವನ್ನು ಬೀಡಿ ಮಾಲಕರು ಪಾವತಿಸಿದಲ್ಲಿ ಕಾರ್ಮಿಕರಿಗೆ ಸ್ವಲ್ಪ ಅನುಕೂಲವಾಗಬಹುದು. ಬಾಕಿಯಿರಿಸಿದ ತುಟ್ಟಿ ಭತ್ತೆ ಮೊತ್ತವನ್ನು ತಕ್ಷಣ ಪಾವತಿಸುವಂತೆ ಒತ್ತಾಯಿಸಿ ಬೀಡಿ ಸಂಸ್ಥೆಯ ವ್ಯವಸ್ಥಾಪಕರ ಮುಖಾಂತರ ಮಾಲೀಕರಿಗೆ ಮನವಿಯನ್ನು ಅರ್ಪಿಸಲಾಯಿತು.

ಎಸ್ ಕೆ ಬೀಡಿ ವರ್ಕರ್‍ಸ್ ಫೆಡರೇಶನ್ ನಾಯಕರಾದ ಎಂ.ಕರುಣಾಕರ್‌, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್, ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್  ಪಾಣೆ ಮಂಗಳೂರು ಪೀರ್ಕಾ ಬೀಡಿಯೂನಿಯನ್‌ ಅಧ್ಯಕ್ಷೆ ಉಮಾವತಿ ಕುರ್ನಾಡು ಎಸ್ ಕೆ ಬೀಡಿ ವರ್ಕರ್‍ಸ್ ಫೆಡರೇಶನ್‌ ಅಧ್ಯಕ್ಷರಾದ ಸೀತಾರಾಮ ಬೇರಿಂಜ, ಪಾಣೆ ಮಂಗಳೂರು ಪೀರ್ಕಾ ಬೀಡಿಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಬಂಟ್ವಾಳ ತಾಲೂಕುಬೀಡಿ ಲೇಬರ್‌ಯೂನಿಯನ್ ನ ಅಧ್ಯಕ್ಚರಾದ ಬಿ.ಬಾಬು ಭಂಡಾರಿ, ಸಹ ಕಾರ್ಯದರ್ಶಿಗಳಾದ ಕೇಶವತಿ, ಹರ್ಷಿತ್, ಶಮಿತಾ, ಮಮತಾ, ಎಐಟಿಯುಸಿ ಜಿಲ್ಲಾ ನಾಯಕರಾದ ವಿ.ಕುಕ್ಯಾನ್, ಬೀಡಿ ಎಂಡ್‌ ಟೊಬೆಕ್ಕೊ ಲೇಬರ್‌ ಯೂನಿಯನ್ ಮಂಗಳೂರು ಅಧ್ಯಕ್ಷೆ ಸುಲೋಚನಾ ಕವತಾರು, ಉಪಾಧ್ಯಕ್ಷರಾದ ತಿಮ್ಮಪ್ಪ ಕಾವೂರು ಉಪಸ್ಥಿತರಿದ್ದರು. ನೇತೃತ್ವವನ್ನು ಎಐಟಿಯುಸಿ ಮುಖಂಡರುಗಳಾದ ಕುಸುಮ ಕಳ್ಳಿಗೆ, ವಿಶ್ವನಾಥ ಕಳ್ಳಿಗೆ, ಎಂ.ಬಿ. ಭಾಸ್ಕರ, ಮೋಹನ್ ಅರಳ, ರೋಹಿಣಿ ಕುರ್ನಾಡು, ಮೋಹಿನಿ ಬಿ.ಸಿರೋಡು  ಮುಂತಾದವರು ವಹಿಸಿದ್ದರು. ಸುರೇಶ್‌ಕುಮಾರ್ ಸ್ವಾಗತಿಸಿ  ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೀಡಿ ಕಾರ್ಮಿಕರ ತುಟ್ಟಿಬತ್ತೆ ಹಾಗೂ ಕನಿಷ್ಠ ಕೂಲಿ ಆಗ್ರಹಿಸಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*