ಬಂಟ್ವಾಳ

ಭಾರಿ ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ಅಲ್ಲಲ್ಲಿ ಹಾನಿ

ಮಳೆಯಿಂದ ಹಾನಿಗಳು ಮುಂದುವರಿದಿದ್ದು, ಬಂಟ್ವಾಳ ತಾಲೂಕಿನಲ್ಲಿ ನದಿ ನೀರಿನ ಮಟ್ಟವೂ ಏರಿದೆ. ಜತೆಗೆ ರಸ್ತೆಗೆ ಮರ ಬಿದ್ದ ಪ್ರಕರಣಗಳೂ ವರದಿಯಾಗಿದ್ದು, ಇಡೀ ದಿನ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು.

ಜಾಹೀರಾತು

ನೆಟ್ಲ ಮುಡ್ನೂರು ಗ್ರಾಮದ ಏಮಾಜೆ ಎಂಬಲ್ಲಿ ಹೊನ್ನಮ್ಮ ವಾಸ್ತವ್ಯದ ಮನೆಯಿಂದ ಪ್ರತ್ಯೇಕವಾಗಿ ಇರುವ ಕೊಟ್ಟಿಗೆ ಹಾನಿಯಾಗಿರುತ್ತದೆ.ನರಿಕೊಂಬು ಗ್ರಾಮದ  ಶಾರದಾ  ಬಿನ್ ನೀಲಪ್ಪರವರ ಮನೆಯ  ಮೇಲೆ  ಮರ ಬಿದ್ದು ಆಂಶಿಕ ಹಾನಿಯಾಗಿದೆ.ವೀರಕಂಭ ಗ್ರಾಮದ ಮಜ್ಜೋನಿ ಎಂಬಲ್ಲಿ ಭಾಗಿ ಎಂಬವರ ಕಚ್ಚಾ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಕರಿಯಂಗಳ ಗ್ರಾಮದ ಮಾರಿಯಮ್ಮ ಎಂಬವರ ಮನೆಯ ಮೇಲ್ಚಾವಣಿ ಕುಸಿದು ಭಾಗಶಃ ಹಾನಿಯಾಗಿದೆ. ಅಮ್ಮುಂಜೆ ಗ್ರಾಮದ ಕೊರಗಪ್ಪ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಭಾಗಶಃ ಹಾನಿಯಾಗಿದೆ.ನರಿಕೊಂಬು ಗ್ರಾಮದ ಕರ್ಬೆಟ್ಟು ಎಂಬಲ್ಲಿ ಬಾಬು ಪೂಜಾರಿರವರ ಮನೆಯ ಮೇಲೆ ಮರ ಬಿದ್ದು ಆಂಶಿಕ ಹಾನಿಯಾಗಿದೆ.

ಜಾಹೀರಾತು

ಕಳ್ಳಿಗೆ ಗ್ರಾಮದ ದಿವಾಕರ್ ಎಂಬವರ ಅಡಕೆ ತೋಟದಲ್ಲಿ ವ್ಯಾಪಕ ಹಾನಿಯಾಗಿದೆ. ಚೆನ್ನೈತ್ತೋಡಿ ಗ್ರಾಮದ ಕರಿಮಲೆ ಎಂಬಲ್ಲಿ ಶಿವರಾಮ ನಾಯಕ್ ಅವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ನಿನ್ನೆ ಬಂದ ಬಾರಿ ಗಾಳಿ, ಮಳೆಗೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಗ್ರಾಮದ ಉಪ್ಪಿರ ಅಂಗನವಾಡಿ ಮೇಲೆ ದೊಡ್ಡದಾದ ಮರ ಉರುಳಿ ಬಿದ್ದು ಅಪಾರ ಹಾನಿಯಾಗಿದೆ. ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿ ಅಪ್ಪಿ ಮೂಲ್ಯ ಅವರ ಮನೆಗೆ ತೆಂಗಿನಮರ ಬಿದ್ದು ಹಾನಿಯಾಗಿದೆ. ಬಡಗಬೆಳ್ಳೂರು ಗ್ರಾಮದ ಬಾಳಿಕೆ ಎಂಬಲ್ಲಿ ವಾಸುದೇವ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ವಿಟ್ಲಮುಡ್ನೂರು ಮುಡಾಯಿಮಾರು ಸತೀಶ್ ಶೆಟ್ಟಿ ಕೊಟ್ಟಿಗೆ ಮೇಲೆ ಮರ ಬಿದ್ದಿದೆ. ಕಾನತ್ತಡ್ಕರ ರಝಾಕ್ ಮನೆ ಮೇಲೆ ಮರ ಬಿದ್ದಿದೆ. ಪುದು ಗ್ರಾಮದ ಸುಜೀರ್ ಬದಿಗುಡ್ಡೆಯಲ್ಲಿ ಅಬುಬಕರ್ ಸಿದ್ದೀಕ್ ಮನೆ ಗೋಡೆ ಕುಸಿದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ