ಬಂಟ್ವಾಳ

ಬಂಟ್ವಾಳದ ನೇತ್ರಾವತಿ ನೀರಿನ ಮಟ್ಟ, ನೆರೆಪೀಡಿತ ಪ್ರದೇಶಗಳಿಗೆ ಸಹಾಯಕ ಆಯುಕ್ತರ ಭೇಟಿ, ಪರಿಶೀಲನೆ

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ನೆರೆಪೀಡಿತ ಪ್ರದೇಶಗಳು ಹಾಗೂ ನೇತ್ರಾವತಿ ನದಿ ನೀರಿನ ಮಟ್ಟವನ್ನು ಭಾನುವಾರ ಮಂಗಳೂರು ಸಹಾಯಕ ಆಯುಕ್ತ ಡಾ. ಹರ್ಷವರ್ಧನ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಂಟ್ವಾಳ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.

ಜಾಹೀರಾತು

ನೆರೆಪೀಡಿತ ಪ್ರದೇಶಗಳಾದ ಪಾಣೆಮಂಗಳೂರು ಗ್ರಾಮದ ಆಲಡ್ಕ, ಪಡ್ಪು ಬಿ.ಮೂಡ ಗ್ರಾಮದ ಬಸ್ತಿಪಡ್ಪು, ಬಂಟ್ವಾಳದ ಮಣಿಹಳ್ಳ, ಮೈಂದಾಳ ಹಾಗೂ ಇನ್ನಿತರ ಮುಳುಗಡೆ ಪ್ರದೇಶಗಳಿಗೆ ಭೇಟಿ ನೀಡಿ  ಪ್ರವಾಹ ಪೀಡಿತ ಪ್ರದೇಶದಲ್ಲಿ ವಾಸಿಸುತ್ತಿರುವ ಮನೆಯವರಿಗೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಲುಸೂಚಿಸಿದರು. ಬಳಿಕ ಪಾಣೆ ಮಂಗಳೂರು ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ‌ ಸಂದರ್ಭ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ವಿಜಯ್.ಆರ್‌, ಗ್ರಾಮ ಆಡಳಿತ ಆಧಿಕಾರಿ ಮತ್ತಿಹಳ್ಳಿ ಪ್ರಕಾಶ್, ಅಶ್ವಿನಿ, ಸಿಬ್ಬಂದಿ ಸದಾಶಿವ ಕೈಕಂಬ, ಯಶೋಧಾ, ಶಿವಪ್ರಸಾದ್, ಸಂದೇಶ್ ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ