Categories: Uncategorized

BANTWAL: UPDATE- ಬಂಟ್ವಾಳದಲ್ಲಿ ಯಾವುದೆಲ್ಲಾ ಶಾಲೆಗಳಿಗೆ ರಜೆ? ತಹಸೀಲ್ದಾರ್ ನೀಡಿರುವ ಮಾಹಿತಿ ಇಲ್ಲಿದೆ

 ಬಂಟ್ವಾಳದಲ್ಲಿ ನೇತ್ರಾವತಿ ನದಿ 7.9 ಮೀಟರ್ ಎತ್ತರದಲ್ಲಿ ಹಲವೆಡೆ ನೆರೆಭೀತಿ ಇದೆ. ಈ ಮಧ್ಯೆ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ತಹಸೀಲ್ದಾರ್ ಎಸ್.ಬಿ.ಕೂಡಲಗಿ ಪತ್ರಿಕೆಗಳಿಗೆ ನೀಡಿದ ಮಾಹಿತಿ ಹೀಗಿದೆ.

ಜಾಹೀರಾತು

ಬೆಳಗ್ಗೆ 5-45 ಶಿಕ್ಷಣ ಇಲಾಖೆಯ ಕ್ಷೇತ್ರಶಿಕ್ಷಣಾಧಿಕಾರಿ ಜ್ಞಾನೇಶ್ ಅವರು ಬಿಆರ್ ಸಿ ಮತ್ತು ಸಿಆರ್ ಸಿ ಹಾಗೂ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ವ್ಹಿ.ಸಿ.ಮುಖಾಂತರ ಚರ್ಚೆ ಮಾಡಿದ ತರುವಾಯ ರಜೆ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿರುವ ಅವರು, ಹಯತುಲ್ ಶಾಲೆ ಗೂಡಿನ ಬಳಿ, ಕಿರಿಯ ಪ್ರಾಥಮಿಕ ಶಾಲೆ ವಳವೂರು, ಶಾರದ ಮತ್ತು ಎಸ್ ಎಲ್ ಎನ್ ಪಿ ಪಾಣೆಮಂಗಳೂರು ,ಎಲ್ ಸಿ ಆರ್ ಕಕ್ಕೆ ಪದವು, ಕೆಪಿಎಸ್ ಮೊಂಟೆಪದವು, ಕುನಿಲ್ ಶಾಲೆ ತುಂಬೆ. ಬಿ ಎ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆ ಪೆರ್ಲಬಿಯಪಾದ ಶಾಲೆ, ಸರಪಾಡಿ ಪ್ರೈಮರಿ ಶಾಲೆ, ಹೆಗಡೆ ಶಾಲೆ, ಪೂಪಾಡಿ ಕಟ್ಟಿ ಶಾಲೆ, ದಡ್ಡಲಕಾಡು, ಎರ್ಮಾಳ್ ಪದವು ಮಜ್ಲಿಸ್ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಉಳಿದಂತೆ ಇತರ ಶಾಲೆ ಪ್ರತಿ ದಿನದಂತೆ ಪ್ರಾರಂಭವಾಗುತ್ತದೆ ಎಂದು ತಹಸೀಲ್ದಾರ್ ಎಸ್.ಬಿ.ಕೂಡಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.