ಬಂಟ್ವಾಳ ಕನ್ನಡ ಭವನದಲ್ಲಿ ಕೃತಿಗಳ ಲೋಕಾರ್ಪಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ರಾಜಗೋಪಾಲ ಕನ್ಯಾನ ಅವರ ಸಂಪಾದಿತ ಅನುವಾದಿತ ಕೃತಿ ಮಲಯಾಳೀ ವಿಷವೈದ್ಯ ಹಾಗೂ ಕೆ.ಟಿ. ರೈ ವಿಟ್ಲ ಮತ್ತು ರಾಜಗೋಪಾಲ ಕನ್ಯಾನ ಜಂಟಿಯಾಗಿ ಸಂಪಾದಿಸಿದ ಕೆದಂಬಾಡಿ ಜತ್ತಪ್ಪ ರೈ ಅವರ ಅನುವಾದಿತ ತುಳು ಗೀತಾಂಜಲಿ ಎಂಬ ಕೃತಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಬಿಡುಗಡೆಗೊಳಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಭಾಷಾಂತರದ ಮೂಲಕ ಪರಸ್ಪರ ಬರೆಹಗಳನ್ನು ಹಂಚಿಕೊಳ್ಳುವುದರಿಂದ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷಾ ಸಂಬಂಧಗಳ ಬೆಸುಗೆ ಸಾಧ್ಯವಿದೆ, ಕನ್ನಡ ಭಾಷೆಯನ್ನು ಇನ್ನೂ ಶ್ರೀಮಂತಗೊಳಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಡಾ. ಕೆದಂಬಾಡಿ ತಿಮ್ಮಪ್ಪ ರೈ ವಿಟ್ಲ ಅವರು ತುಳು ಗೀತಾಂಜಲಿ ಬಗ್ಗೆ, ಡಾ. ಅಜಕ್ಕಳ ಗಿರೀಶ ಭಟ್ ಅವರು ಪುಸ್ತಕ ಪ್ರಕಟಣಾ ಕಾರ್ಯಗಳ ಕುರಿತು ಹಾಗೂ ಡಾ. ಜೆಡ್ಡು ಗಣಪತಿ ಭಟ್ ಅವರು ಮಲಯಾಳಿ ವಿಷವೈದ್ಯ ಕೃತಿ ಸಂಬಂಧಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃತಿ ಸಂಪಾದಕ ರಾಜಗೋಪಾಲ ಕನ್ಯಾನ ಕೃತಿ ಪ್ರಕಟಣೆ ಕುರಿತು ಮಾತನಾಡಿದರು. ಅಬುಬಕ್ಕರ್ ಅಮ್ಮುಂಜೆ ನಾಡಗೀತೆ ಹಾಡಿದರು. ಗೌರವ ಕಾರ್ಯದರ್ಶಿಗಳಾದ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದ ಸಮಾರಂಭದಲ್ಲಿ ತಾಲೂಕು ಕಸಾಪ ಸಂಘಟನಾ ಕಾರ್ಯದರ್ಶಿ ಜಯರಾಮ ಪಡ್ರೆ ಸ್ವಾಗತಿಸಿದರು. ಮತ್ತೋರ್ವ ಸಂಘಟನಾ ಕಾರ್ಯದರ್ಶಿ ದಾಮೋದರ ಏರ್ಯ ವಂದಿಸಿದರು. ಕೋಶಾಧ್ಯಕ್ಷ ಅಬ್ದುಲ್ ರಹಿಮಾನ್ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ನುರಿತ ಕಲಾವಿದರಿಂದ ಉಲೂಪಿ ವಿವಾಹ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

1 Comment on "ಬಂಟ್ವಾಳ ಕನ್ನಡ ಭವನದಲ್ಲಿ ಕೃತಿಗಳ ಲೋಕಾರ್ಪಣೆ"

  1. Raja Gopal Kanyana | July 27, 2023 at 7:33 am | Reply

    ಕೃತಜ್ಞತೆಗಳು.
    – ರಾಜಗೋಪಾಲ್ ಕನ್ಯಾನ

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*