ಬಂಟ್ವಾಳ

ಬಂಟ್ವಾಳ ಕನ್ನಡ ಭವನದಲ್ಲಿ ದತ್ತಿ ಉಪನ್ಯಾಸ

ಬಂಟ್ವಾಳ: ಬಂಟ್ವಾಳ ಕನ್ನಡ ಭವನದಲ್ಲಿ ಎರಡು ದತ್ತಿ ಉಪನ್ಯಾಸಗಳು ನಡೆದವು. ಡಾ.ಜಾನಕಿ ಸುಂದರೇಶ್ ಸ್ಥಾಪಿತ ಕಳಸ ಪುಟ್ಟದೇವರಯ್ಯ ನಾಗಮ್ಮ ದತ್ತಿ ಉಪನ್ಯಾಸವನ್ನು ಮಾಡಿದ ಕವಯತ್ರಿ, ಉಪನ್ಯಾಸಕಿ ಗೀತಾ ಎಸ್.ಕೊಂಕೋಡಿ, ಕಾದಂಬರಿಕಾರ್ತಿ ಗಂಗಾ ಪಾದೇಕಲ್ ಅವರ ಮೌನರಾಗಗಳು ಕಾದಂಬರಿ ಕುರಿತು ಮಾತನಾಡಿದರು. ಸ್ತ್ರೀಯ ಬದುಕಿನ ನೈಜ ಚಿತ್ರಣವನ್ನು ರೋಗ ರುಜಿನಗಳನ್ನು ಎದುರಿಸಿ ನಿಲ್ಲುವ ಸ್ಥೈರ್ಯವನ್ನು ಕಾದಂಬರಿ ನೀಢುತ್ತದೆ ಎಂದರು.

ಜಾಹೀರಾತು

ಡಾ.ಮನಮೋಹನ ವಿಟ್ಲ ಸ್ಥಾಪಿತ ಪ್ರೊ. ಎಂ.ರಾಮಕೃಷ್ಣ ಭಟ್ ದತ್ತಿ ಉಪನ್ಯಾಸದಲ್ಲಿ ಯುವಕವಿ, ಉಪನ್ಯಾಸಕ ರಮೇಶ್ ಮೆಲ್ಕಾರ್ ಸಂಸ್ಕೃತ, ಕನ್ನಡಗಳ ಕುರಿತು ಮಾತನಾಡಿದರು. ಐದು ಸಾವಿರ ವರ್ಷಗಳಿಂತಲೂ ಅಧಿಕ ಇತಿಹಾಸವಿರುವ ಸಂಸ್ಕೃತ ಎಲ್ಲ ಭಾಷೆಗಳಿಗೂ ತಾಯಿ ಇದ್ದಂತೆ, ಕನ್ನಡಕ್ಕಂತೂ ಸಂಸ್ಕೃತ ಭಾಷೆ ಎರವಲು ಅನಿವಾರ್ಯ ಎಂದರು. ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಕಾರ್ಯದರ್ಶಿ ವಿ.ಸು.ಭಟ್, ಗೌರವ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಡಿ.ಬಿ. ಉಪಸ್ಥಿತರಿದ್ದರು. ಕವಿ, ಪ್ರಾಧ್ಯಾಪಕ ಎಂ.ಡಿ.ಮಂಚಿ ಸ್ವಾಗತಿಸಿದರು. ಕವಯತ್ರಿ ರಜನಿ ಚಿಕ್ಕಯ್ಯಮಠ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.