ಬಂಟ್ವಾಳ

ಬಂಟ್ವಾಳ ಕನ್ನಡ ಭವನದಲ್ಲಿ ದತ್ತಿ ಉಪನ್ಯಾಸ

ಬಂಟ್ವಾಳ: ಬಂಟ್ವಾಳ ಕನ್ನಡ ಭವನದಲ್ಲಿ ಎರಡು ದತ್ತಿ ಉಪನ್ಯಾಸಗಳು ನಡೆದವು. ಡಾ.ಜಾನಕಿ ಸುಂದರೇಶ್ ಸ್ಥಾಪಿತ ಕಳಸ ಪುಟ್ಟದೇವರಯ್ಯ ನಾಗಮ್ಮ ದತ್ತಿ ಉಪನ್ಯಾಸವನ್ನು ಮಾಡಿದ ಕವಯತ್ರಿ, ಉಪನ್ಯಾಸಕಿ ಗೀತಾ ಎಸ್.ಕೊಂಕೋಡಿ, ಕಾದಂಬರಿಕಾರ್ತಿ ಗಂಗಾ ಪಾದೇಕಲ್ ಅವರ ಮೌನರಾಗಗಳು ಕಾದಂಬರಿ ಕುರಿತು ಮಾತನಾಡಿದರು. ಸ್ತ್ರೀಯ ಬದುಕಿನ ನೈಜ ಚಿತ್ರಣವನ್ನು ರೋಗ ರುಜಿನಗಳನ್ನು ಎದುರಿಸಿ ನಿಲ್ಲುವ ಸ್ಥೈರ್ಯವನ್ನು ಕಾದಂಬರಿ ನೀಢುತ್ತದೆ ಎಂದರು.

ಜಾಹೀರಾತು

ಡಾ.ಮನಮೋಹನ ವಿಟ್ಲ ಸ್ಥಾಪಿತ ಪ್ರೊ. ಎಂ.ರಾಮಕೃಷ್ಣ ಭಟ್ ದತ್ತಿ ಉಪನ್ಯಾಸದಲ್ಲಿ ಯುವಕವಿ, ಉಪನ್ಯಾಸಕ ರಮೇಶ್ ಮೆಲ್ಕಾರ್ ಸಂಸ್ಕೃತ, ಕನ್ನಡಗಳ ಕುರಿತು ಮಾತನಾಡಿದರು. ಐದು ಸಾವಿರ ವರ್ಷಗಳಿಂತಲೂ ಅಧಿಕ ಇತಿಹಾಸವಿರುವ ಸಂಸ್ಕೃತ ಎಲ್ಲ ಭಾಷೆಗಳಿಗೂ ತಾಯಿ ಇದ್ದಂತೆ, ಕನ್ನಡಕ್ಕಂತೂ ಸಂಸ್ಕೃತ ಭಾಷೆ ಎರವಲು ಅನಿವಾರ್ಯ ಎಂದರು. ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಕಾರ್ಯದರ್ಶಿ ವಿ.ಸು.ಭಟ್, ಗೌರವ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಡಿ.ಬಿ. ಉಪಸ್ಥಿತರಿದ್ದರು. ಕವಿ, ಪ್ರಾಧ್ಯಾಪಕ ಎಂ.ಡಿ.ಮಂಚಿ ಸ್ವಾಗತಿಸಿದರು. ಕವಯತ್ರಿ ರಜನಿ ಚಿಕ್ಕಯ್ಯಮಠ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts